ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮೇ.10) : ಇಲ್ಲಿನ ರೋಟರಿ ಬಾಲಭವನದ ಸಮೀಪವಿರುವ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಚೇರಿಯಲ್ಲಿ ಬುಧವಾರ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.
ಹೇಮರಡ್ಡಿ ಮಲ್ಲಮ್ಮ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಚಿದಾನಂದಪ್ಪ ಆರು ನೂರು ವರ್ಷಗಳ ಹಿಂದೆ ಶ್ರೀಶೈಲದ ವೆಲಟೂರು ಜಿಲ್ಲೆಗೆ ಸೇರಿದ ರಾಮಪುರದಲ್ಲಿ ರಾಮರೆಡ್ಡಿ ಗೌರಮ್ಮ ದಂಪತಿಗಳ ಮಗಳಾಗಿ ಜನಿಸಿದ ಹೇಮರಡ್ಡಿ ಮಲ್ಲಮ್ಮ ಚನ್ನಮಲ್ಲಿಕಾರ್ಜುನನ ಭಕ್ತೆಯಾಗಿದ್ದಳು.
ವಿವಾಹದ ನಂತರ ತನ್ನ ಅತ್ತೆ, ನಾದಿನಿಯವರ ಕಾಟವನ್ನು ಸಹಿಸಿಕೊಂಡು ಎಲ್ಲರ ಮನಗೆದ್ದಂತ ಮಹಾನ್ ಶಿವಶರಣೆ ಎಂದು ಸ್ಮರಿಸಿದರು.
ಹೇಮರಡ್ಡಿ ಮಲ್ಲಮ್ಮ ಕೇವಲ ಶಿವಶರಣೆಯಷ್ಟೆ ಅಲ್ಲ. ತ್ಯಾಗ, ಪರಾಕ್ರಮ, ಶ್ರದ್ದೆ, ಭಕ್ತಿಗೆ ಹೆಸರಾಗಿದ್ದವರು. ಅವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಾರ್ಯದರ್ಶಿ ಟಿ.ಟಿ.ಶಿವಾನಂದಪ್ಪ, ಉಪ ಕಾರ್ಯದರ್ಶಿ ಸತೀಶ್, ಖಜಾಂಚಿ ಬಸವರಾಜಪ್ಪ, ನಿರ್ದೇಶಕರುಗಳಾದ ನ್ಯಾಯವಾದಿ ವಿಶ್ವನಾಥ್, ಆರ್.ಡಿ.ತಿಪ್ಪೇಸ್ವಾಮಿ, ಡಾ.ಮಹಂತೇಶ್, ಶಶಿಧರ್, ವಕೀಲರುಗಳಾದ ನೀತಜ, ರಘು, ದಯಾನಂದಪಾಟೀಲ್, ನಾಗರಾಜ್ ಸಂಗಂ, ಸಮಾಜದ ಎಲ್ಲಾ ಬಂಧುಗಳು ಜಯಂತಿಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್