Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

T20 ವಿಶ್ವಕಪ್-2021: ಐಸಿಸಿ ವಿರುದ್ಧ ಶೋಯೆಬ್ ಅಖ್ತರ್ ಅಸಮಾಧಾನ

Facebook
Twitter
Telegram
WhatsApp

ಸುದ್ದಿಒನ್ ಸ್ಪೋರ್ಟ್ಸ್ ಡೆಸ್ಕ್ : T20 ವಿಶ್ವಕಪ್-2021 (ನವೆಂಬರ್ 14) ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಮೂಲಕ ಮೊದಲ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದೆ. ಸ್ಟಾರ್ ಓಪನರ್ ಡೇವಿಡ್ ವಾರ್ನರ್ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಫೈನಲ್‌ನಲ್ಲಷ್ಟೇ ಅಲ್ಲದೆ ಟೂರ್ನಿಯುದ್ದಕ್ಕೂ ವಾರ್ನರ್‌ ಉತ್ತಮ ಆಟ ಪ್ರದರ್ಶಿಸಿದರು.

ಐಸಿಸಿ ಡೇವಿಡ್ ವಾರ್ನರ್ ಅವರನ್ನು ಸರಣಿ ಶ್ರೇಷ್ಠ  ಆಟಗಾರ ಎಂದು ಘೋಷಿಸಿದೆ . ಆದರೆ, ಡೇವಿಡ್ ವಾರ್ನರ್ ಅವರನ್ನು ಟೂರ್ನಮೆಂಟ್ ಆಫ್ ದಿ ಪ್ಲೇಯರ್ ಆಗಿ ಆಯ್ಕೆ ಮಾಡಿರುವ ಬಗ್ಗೆ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಅಖ್ತರ್, “ಇದು ಸರಿಯಾದ ನಿರ್ಧಾರವಲ್ಲ. ಬಾಬರ್ ಅಜಮ್ ಗೆ  ಪ್ಲೇಯರ್ ಆಫ್ ದಿ ಟೂರ್ನಮೆಂಟ್ ನೀಡುತ್ತಾರೆಂದು ಎದುರು ನೋಡುತ್ತಿದ್ದೆ.  ಖಂಡಿತವಾಗಿಯೂ ಅನ್ಯಾಯವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಏಕೆಂದರೆ, ಈ ಟೂರ್ನಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಕೂಡ ಉತ್ತಮ ಆಟವಾಡಿದ್ದಾರೆ.
ಈ ಬಾರಿಯ ವಿಶ್ವಕಪ್‌ನಲ್ಲಿ ಆರು ಪಂದ್ಯಗಳಲ್ಲಿ 303 ರನ್ ಗಳಿಸಿರುವ ಬಾಬರ್ ಅಜಮ್ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಮತ್ತೊಂದೆಡೆ, ವಾರ್ನರ್ ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 289 ರನ್ ಗಳಿಸಿದರು. ಅತಿ ಹೆಚ್ಚು ರನ್ ಗಳಿಸಿದ ಬಾಬರ್ ಗೆ ಪ್ರಶಸ್ತಿ ನೀಡದ ಐಸಿಸಿ ವಿರುದ್ಧ ಅಖ್ತರ್ ವಾಗ್ದಾಳಿ ನಡೆಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!