Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 1.30 ಕೋಟಿ ಲಂಚ ಪಡೆದ ಆರೋಪ ಮಾಡಿದ ಶೋಭಾ ಕರಂದ್ಲಾಜೆ..!

---Advertisement---

 

ಬೆಂಗಳೂರು: ಅದ್ಯಾಕೋ ಏನೋ ಕ್ಲೀನ್ ಹ್ಯಾಂಡ್ ಆಗಿದ್ದುಕೊಂಡು ಇಷ್ಟು ವರ್ಷ ರಾಜಕೀಯ ಪಯಣ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಒಂದರ ಮೇಲೊಂದು ಆರೋಪಗಳು ಕೇಳಿ ಬರುತ್ತಿವೆ. ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಿದ್ದರಾಮಯ್ಯ ಅವರ ವಿರುದ್ಧ ಲಂಚ ಪ್ರಕರಣದ ಆರೋಪ ಮಾಡಿದ್ದಾರೆ. ಟರ್ಫ್ ಕ್ಲಬ್ ಮೆಂಬರ್ ಶಿಪ್ ನೀಡಲು 1.30 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಟರ್ಫ್ ಕ್ಲಬ್ ಕೇಸಿನಲ್ಲಿ ಸ್ಟೂವರ್ಡ್ ಮಾಡಲು ಚೆಕ್ ನಲ್ಲಿ 1.30 ಕೋಟಿ ಪಡೆದವರು ಸಿದ್ದರಾಮಯ್ಯ. ಸಿದ್ದರಾಮಯ್ಯನವರು ಹೇಗೆ ಭ್ರಷ್ಟಾಚಾರ ರಹಿತರಾಗುತ್ತಾರೆ..? ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು 1997ರ ನಂತರದ ಎಲ್ಲಾ ಕಡತಗಳನ್ನು ಕಾರಿನಲ್ಲಿ ತುಂಬಿಸಿ ತಂದಿದ್ದಾರೆ. ಅವು ಎಲ್ಲಿ ಹೋಗಿದೆ ಎಂದು ಕೇಳಿದರೆ, ಸುಟ್ಟು ಹಾಕಲಾಗಿದೆ ಎಂದು ದೂರಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಪರಮಾಪ್ತ ಮೂಡಾ ಅಧ್ಯಕ್ಷ ಮರೀಗೌಡರ ರಾಜೀನಾಮೆ ಪಡೆದಿದ್ದು ಯಾಕೆ ? ಅವರ ರಾಜೀನಾಮೆ ಪಡೆದು ಅವರ ಮೇಲೆ ಹಗರಣವನ್ನು ಹೊರಿಸಲು ಹೊರಟಿದ್ದಾರೆ.

ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು. ಭೈರತಿ ಸುರೇಶ್ ಅವರನ್ನು ತಕ್ಷಣ ಬಂಧಿಸಬೇಕು. ಭೈರತಿ ಸುರೇಶ್ ಬಂಧನವಾದರೆ ಸತ್ಯ ತಕ್ಷಣಕ್ಕೆ ಹೊರ ಬರಲಿದೆ. ಅವರ ತನಿಖೆ ನಡೆಸಬೇಕಿದೆ, ತಪಾಸಣೆ ಮಾಡಬೇಕಿದೆ‌. ಅವರು ತಂದ ಕಡತಗಳ ವಿವರವನ್ನು ಪಡೆದುಕೊಳ್ಳಬೇಕಿದೆ‌. ಸರ್ಕಾರದ ಬೊಕ್ಕಸದ ಹಣ ಕೂಡ ಇಂದು ಕಾಂಗ್ರೆಸ್ ಪಕ್ಷಕ್ಕೆ ವರ್ಗಾವಣೆಯಾಗುತ್ತಿದೆ. ಸಿದ್ದರಾಮಯ್ಯ ಅವರು ಬಹಳ ಪರಿಶುದ್ಧ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಈಗ ಅವರ ಶುದ್ಧತೆಯ ಒಂದೊಂದೆ ಮುಖವಾಡ ಕಳಚಿ ಬೀಳುತ್ತಿವೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment