Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 1.30 ಕೋಟಿ ಲಂಚ ಪಡೆದ ಆರೋಪ ಮಾಡಿದ ಶೋಭಾ ಕರಂದ್ಲಾಜೆ..!

---Advertisement---

 

ಬೆಂಗಳೂರು: ಅದ್ಯಾಕೋ ಏನೋ ಕ್ಲೀನ್ ಹ್ಯಾಂಡ್ ಆಗಿದ್ದುಕೊಂಡು ಇಷ್ಟು ವರ್ಷ ರಾಜಕೀಯ ಪಯಣ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಒಂದರ ಮೇಲೊಂದು ಆರೋಪಗಳು ಕೇಳಿ ಬರುತ್ತಿವೆ. ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಿದ್ದರಾಮಯ್ಯ ಅವರ ವಿರುದ್ಧ ಲಂಚ ಪ್ರಕರಣದ ಆರೋಪ ಮಾಡಿದ್ದಾರೆ. ಟರ್ಫ್ ಕ್ಲಬ್ ಮೆಂಬರ್ ಶಿಪ್ ನೀಡಲು 1.30 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಟರ್ಫ್ ಕ್ಲಬ್ ಕೇಸಿನಲ್ಲಿ ಸ್ಟೂವರ್ಡ್ ಮಾಡಲು ಚೆಕ್ ನಲ್ಲಿ 1.30 ಕೋಟಿ ಪಡೆದವರು ಸಿದ್ದರಾಮಯ್ಯ. ಸಿದ್ದರಾಮಯ್ಯನವರು ಹೇಗೆ ಭ್ರಷ್ಟಾಚಾರ ರಹಿತರಾಗುತ್ತಾರೆ..? ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು 1997ರ ನಂತರದ ಎಲ್ಲಾ ಕಡತಗಳನ್ನು ಕಾರಿನಲ್ಲಿ ತುಂಬಿಸಿ ತಂದಿದ್ದಾರೆ. ಅವು ಎಲ್ಲಿ ಹೋಗಿದೆ ಎಂದು ಕೇಳಿದರೆ, ಸುಟ್ಟು ಹಾಕಲಾಗಿದೆ ಎಂದು ದೂರಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಪರಮಾಪ್ತ ಮೂಡಾ ಅಧ್ಯಕ್ಷ ಮರೀಗೌಡರ ರಾಜೀನಾಮೆ ಪಡೆದಿದ್ದು ಯಾಕೆ ? ಅವರ ರಾಜೀನಾಮೆ ಪಡೆದು ಅವರ ಮೇಲೆ ಹಗರಣವನ್ನು ಹೊರಿಸಲು ಹೊರಟಿದ್ದಾರೆ.

ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು. ಭೈರತಿ ಸುರೇಶ್ ಅವರನ್ನು ತಕ್ಷಣ ಬಂಧಿಸಬೇಕು. ಭೈರತಿ ಸುರೇಶ್ ಬಂಧನವಾದರೆ ಸತ್ಯ ತಕ್ಷಣಕ್ಕೆ ಹೊರ ಬರಲಿದೆ. ಅವರ ತನಿಖೆ ನಡೆಸಬೇಕಿದೆ, ತಪಾಸಣೆ ಮಾಡಬೇಕಿದೆ‌. ಅವರು ತಂದ ಕಡತಗಳ ವಿವರವನ್ನು ಪಡೆದುಕೊಳ್ಳಬೇಕಿದೆ‌. ಸರ್ಕಾರದ ಬೊಕ್ಕಸದ ಹಣ ಕೂಡ ಇಂದು ಕಾಂಗ್ರೆಸ್ ಪಕ್ಷಕ್ಕೆ ವರ್ಗಾವಣೆಯಾಗುತ್ತಿದೆ. ಸಿದ್ದರಾಮಯ್ಯ ಅವರು ಬಹಳ ಪರಿಶುದ್ಧ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಈಗ ಅವರ ಶುದ್ಧತೆಯ ಒಂದೊಂದೆ ಮುಖವಾಡ ಕಳಚಿ ಬೀಳುತ್ತಿವೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment