Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವತ್ತು ತಲೆಯಲ್ಲಿ ಸಗಣಿ ಇತ್ತಾ..? : ಕಾಂಗ್ರೆಸ್ ಗೆ ಶೋಭಾ ಕರಂದ್ಲಾಜೆ ಪ್ರಶ್ನೆ

Facebook
Twitter
Telegram
WhatsApp

 

 

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದ ಮೇಲೆ, ತನ್ನ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಕ್ಕೆ ಹರಸಾಹಸ ಪಡುತ್ತಿದೆ. ಆದರೂ ತಂದೆ ತರ್ತೀವಿ ಎಂಬ ಮಾತುಗಳನ್ನು ಹೇಳಿದೆ. ಈ ಬಗ್ಗೆ ಗರಂ ಆಗಿರುವ ಶೋಭಾ ಕರಂದ್ಲಾಜೆ, ವಿಧಾನಸಭಾ ಚುನಾವಣೆ ವೇಳೆ ನಿಮ್ಮ ಗ್ಯಾರಂಟಿಗಳ ಭರವಸೆಗಳನ್ನು ನೀಡುವಾಗ ತಲೆಯಲ್ಲಿ ಮೆದುಳು ಇರಲಿಲ್ವಾ..? ಸಗಣಿ ಇಟ್ಟುಕೊಂಡಿದ್ದರಾ..? ಎಂದು ಪ್ರಶ್ನೆ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ವೇಳೆ ಗೆಲ್ಲುವುದಕ್ಕೆ ಸುಳ್ಳು ಆಶ್ವಾಸನೆ ನೀಡಿದರಾ..? ಐದು ಭರವಸೆಗಳನ್ನು ಈಡೇರಿಸಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಬೇಜವಬ್ದಾರಿ ಸರ್ಕಾರವಾಗಿದೆ. ಕೇಂದ್ರದಲ್ಲಿ ದಾಸ್ತಾನು ಇರುವುದು ತುರ್ತು ಸಂದರ್ಭದಲ್ಲಿ ಜನರಿಗೆ ನೀಡುವುದಕ್ಕೆ ಎಂದಿದ್ದಾರೆ.

ಆಡಳಿತ ನೀಡಲು ಯೋಗ್ಯತೆಯಿಲ್ಲದೆ ಪ್ರತಿ ವಿಚಾರಕ್ಕೂ ನರೇಂದ್ರ ಮೋದಿ ಹಾಗೂ ಕೇಂದ್ರದ ಕಡೆ ಬೊಟ್ಟು ತೋರಿಸಬೇಡಿ. ಕೇಂದ್ರ ಕೊಡುತ್ತಿರುವ ಐದು ಕೆ.ಜಿ ಸೇರಿಸಿ ಹತ್ತು ಕೆ.ಜಿ ನೀಡಬೇಡಿ. ರಾಜ್ಯದಲ್ಲಿ ಆರಾಜಕತೆ ತುಂಬಿದೆ. ವಿದ್ಯುತ್ ‌ಬಿಲ್ ಹೆಚ್ಚಾಗಿದೆ. ಒಬ್ಬ ಮರ್ಯಾದೆ ಇಲ್ಲದ, ಬೇಜವಾಬ್ದಾರಿ ಮುಖ್ಯಮಂತ್ರಿಗಳಂತೆ ಸಿದ್ದರಾಮಯ್ಯ ಅವರು ಮೋದಿ ಕೊಡಲ್ಲ ಎಂದು ಹೇಳುತ್ತಿದ್ದಾರೆ ಕೇಂದ್ರದಲ್ಲಿ ಬಫರ್ ಸ್ಟಾಕ್ ಇರುವುದು ದೇಶಕ್ಕೆ ಆಪತ್ತು ಬಂದಾಗ ಉಪಯೋಗಿಸಲು. ಗ್ಯಾರಂಟಿ ಹೆಸರಲ್ಲಿ ವೋಟು ತಗೆದುಕೊಂಡು ಆಡಳಿತ ನಡೆಸಲು ಸಿದ್ದರಾಮಯ್ಯಗೆ ಯೋಗ್ಯತೆ ಇಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

error: Content is protected !!