Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

NEET-UG ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ : ಗ್ರೇಸ್ ಅಂಕ ಪಡೆದವರಿಗೆ ಮತ್ತೆ ಪರೀಕ್ಷೆ..!

---Advertisement---

NEET-UG ಫಲಿತಾಂಶ ಪ್ರಕಟವಾದ ನಂತರ ರ್ಯಾಂಕ್ ವಿಚಾರದಲ್ಲಿ ಸಾಕಷ್ಟು ವಿವಾದ ಉಂಟಾಗಿತ್ತು. ಈ ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಸುಪ್ರೀಂ ಕೋರ್ಟ್ ಮರುಪರೀಕ್ಷೆಗೆ ಸೂಚನೆ ನೀಡಿದೆ.

ಇಡಿ ಟೆಜ್ ಸಂಸ್ಥೆಯ ಫಿಸಿಕ್ಸ್ ವಲ್ಲಾ ಮುಖ್ಯ ಕಾರ್ಯನಿರ್ವಾಹಕರಾಗಿದ್ದು, ಈ ಸಂಬಂಧ ಅರ್ಜಿ ಸಲ್ಲಿಕೆ ಮಾಡಿದ್ದರು. ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ಪೀಠವೂ ಇದರ ವಿಚಾರಣೆ ನಡೆಸಿದೆ. ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ಕೋರ್ಟ್ ವಿದ್ಯಾರ್ಥಿಗಳಿಗೆ ಮಹತ್ವದ ಸಲಹೆ ನೀಡಿದೆ. ಆದರೆ ವಿದ್ಯಾರ್ಥಿಗಳಿಗೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದೆ.

ಗ್ರೇಸ್ ಮಾರ್ಕ್ಸ್ ನೀಡಿದ್ದ ಅಂಕಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ್ದು, ಗ್ರೇಸ್ ಅಂಕಗಳನ್ನು ಪಡೆದ 1563 ವಿದ್ಯಾರ್ಥಿಗಳು ಮತ್ತೆ ಪರೀಕ್ಷೆಗೆ ಹಾಜರಾಗಬೇಕೆಂದು ಕೋರ್ಟ್ ಹೇಳಿದೆ. ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಸರಿಯಲ್ಲ ಎಂದೇ ಸುಪ್ರೀಂ ಕೋರ್ಟ್ ಹೇಳಿದೆ.

ಹೀಗಾಗಿ NEET-UG 2024ರ ಪರೀಕ್ಷೆಯಲ್ಲಿ ಗ್ರೇಸ್ ಅಂಕಗಳನ್ನು ಪಡೆದ ಅಭ್ಯರ್ಥಿಗಳು ಪುನಃ ಹಾಜರಾಗಬೇಕಾಗುತ್ತದೆ. ಈ ಪರೀಕ್ಚೆಯ ಫಲಿತಾಂಶ ಜೂನ್ 23ರಂದು ಬಿಡುಗಡೆಯಾಗಲಿದೆ. ಇದಾದ ಬಳಿಕ ಕೌನ್ಸೆಲಿಂಗ್ ಪ್ರಕ್ರಿಯೆಯೂ ಶುರುವಾಗಲಿದೆ ಎಂದು ಕೋರ್ಟ್ ತೀರ್ಪು ನೀಡಿದೆ.

ಕಳೆದ ವರ್ಷ NEET ಫಲಿತಾಂಶಗಳಿಗೆ ಹೋಲಿಕೆ ಮಾಡಿದರೆ ಅವರ ನಿರೀಕ್ಷಿತ ರ್ಯಾಂಕ್ ಶ್ರೇಣಿಗಳು ಈಗ 20 ರಿಂದ 25 ಸಾವಿರದಷ್ಟು ಕೆಳಗೆ ಇಳಿದಿದೆ. ಇದರಿಂದಾಗಿ ಅವರು ಬಯಸಿದ ಶಿಕ್ಷಣ ಸಂಸ್ಥೆಯಲ್ಲಿ ಸೀಟು ಸಿಗುತ್ತಿಲ್ಲ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment