ನವದೆಹಲಿ: ಶಿವಸೇನಾ ಸಂಸದ ಸಂಜಯ್ ರಾವತ್ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನನ್ನನ್ನು ಶೂಟ್ ಮಾಡಿದರು, ಜೈಲಿಗೆ ಹಾಕಿದರೂ ನಾನು ಹೆದರುವುದಿಲ್ಲ. ನಾನು ನಿಜವಾದ ಶಿವ ಸೈನಿಕ. ಕೇಂದ್ರ ಸರ್ಕಾರದ ಏಜೆನ್ಸಿಗಳು ನನ್ನ ಆಸ್ತಿಯನ್ನು ವಶಪಡಿಸಿಕೊಂಡಿವೆ ಎಂದು ಹರಿಹಾಯ್ದಿದ್ದಾರೆ.
ಇಂದು ಜಾರಿ ನಿರ್ದೇಶನಾಲಯ ಸಂಜಯ್ ರಾವತ್ ಅವರಿಗೆ ಸಂಬಂಧಿಸಿದ ಆಸ್ತಿಯನ್ನು ಜಪ್ತಿ ಮಾಡಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ಅವರಿಗೆ ಸಂಬಂಧಿಸಿದ ಆಲಿಬಾಗ್ ನಲ್ಲಿರುವ 9 ಕೋಟಿ, ದಾದರ್ ಉಪನಗರದಲ್ಲಿರುವ 2 ಕೋಟಿ ಮೌಲ್ಯದ ಫ್ಲ್ಯಾಟ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಈ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಸಂಜಯ್ ಆಕ್ರೋಶಗೊಂಡಿದ್ದಾರೆ. ನನ್ನ ವಿರುದ್ಧ ಒಂದೇ ಒಂದು ರೂಪಾಯಿ ಕಪ್ಪುಹಣ ಸಿಕ್ಕರೂ ನನ್ನ ಸಂಪೂರ್ಣ ಆಸ್ತಿಯನ್ನು ಬಿಟ್ಟುಕೊಡುತ್ತೇನೆ. ನನ್ನ ವಿರುದ್ಧ ಏನೇ ಷಡ್ಯಂತ್ರ ರೂಪಿಸಿದರು, ಯಾರೂ ಏನೇ ಹೇಳಿದರೂ ನಾನು ಹೆದರುವುದಿಲ್ಲ. ಸತ್ಯ ಯಾವತ್ತೆ ಆದರೂ ಮೇಲುಗೈ ಸಾಧಿಸಿಯೇ ಸಾಧಿಸುತ್ತೆ. ಇದರ ವಿರುದ್ಧ ಹೋರಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.