ಸಿನಿಮಾ ಸ್ಟೈಲ್ ನಲ್ಲಿ ಪ್ರತಿಭಟನೆಯ ನಡುವೆಯೇ ಎದ್ದ ವ್ಯಕ್ತಿಯಿಂದ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ..!

ಚಂಡೀಗಢ: ಪ್ರತಿಭಟನೆ ನಡೆಸುತ್ತಿದ್ದ ಶಿವಸೇನೆ ನಾಯಕ ಸುಧೀರ್ ಸೂರಿ ಎಂಬುವವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡೇಟಿಗೆ ಬಲಿಯಾಗಿದ್ದಾರೆ. ಹಾಡಹಗಲೇ ನಡೆದ ಈ ಭೀಕರ ಕೊಲೆಗೆ ಪಂಜಾಬ್ ಜನತೆ ಬೆಚ್ಚಿ ಬಿದ್ದಿದ್ದಾರೆ. ಅಮೃತಸರದ ದೇವಸ್ಥಾನದ ಮುಂಭಾಗದಲ್ಲಿ ಈ ಘಟನೆ ನಡೆದಿದೆ.

ಅಮೃತಸರ್ ದೇವಸ್ಥಾನದ ಹೊರಗೆ ಹರಿದು ಹೋದ ಫೋಟೋಗಳು, ಮುರಿದ ದೇವರ ಮೂರ್ತಿ ಇರುವುದನ್ನು ಖಂಡಿಸಿ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಶಿವಸೇನೆ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು. ಕೊಲೆಯಾದ ಸುಧೀರ್ ಸೂರಿ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಆದ್ರೆ ದೇವಸ್ಥಾನದ ಮುಂದೆ ನೆರೆದಿದ್ದ ಜನ ನಡುವಿನಿಂದ ಎದ್ದ ವ್ಯಕ್ತಿಯೊಬ್ಬ ಸೂರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.

ಸಿನಿಮಾ ಸ್ಟೈಲ್ ನಲ್ಲಿ ಜನರ ನಡುವೆ ಎದ್ದು ಕೊಲೆ ಮಾಡುವ ರೀತಿಯಲ್ಲಿ ಜನರ ನಡುವೆ ಏಕಾಏಕಿ ಎದ್ದ ವ್ಯಕ್ತಿ ಸುಧೀರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಿಂದ ಸುಧೀರ್ ಪ್ರಾಣ ಕಳೆದುಕೊಂಡಿದ್ದಾರೆ. ಪಂಜಾಬ್ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಹುಡುಕಾಟದಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *