Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ ಹುಟ್ಟಿದ ಮಾತ್ರಕ್ಕೆ ಕನ್ನಡ ಬರಲೇಬೇಕಾ : ನಟ ಸಲ್ಮಾನ್ ವಿಡಿಯೋ ವೈರಲ್..!

---Advertisement---

ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್ ಯೂಸೂಫ್ ಖಾನ್ ಕನ್ನಡ ಭಾಷೆಗೆ ಸಂಬಂಧಿಸಿದಂತೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಲ್ಮಾನ್ ಅವರ ಪಾಸ್ ಪೋರ್ಟ್ ನೋಡಿದ ಅಧಿಕಾರಿಯೊಬ್ಬರು, ಬೆಂಗಳೂರಿಗರೇ ಎಂದು ಗೊತ್ತಾದ‌ ಮೇಲೆ ಕನ್ನಡದಲ್ಲಿ ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಆದ್ರೆ ಸಲ್ಮಾನ್ ನನಗೆ ಕನ್ನಡ ಬರಲ್ಲ ಅಂತ ಹೇಳಿ, ವಿಡಿಯೋ ಮಾಡಿ, ಆ ಅಧಿಕಾರಿಯ ಮೇಲೆಯೇ ಕೆಂಡಕಾರಿದ್ದಾರೆ.

ಈ ಬಗ್ಗೆ ಆರೋಪ ಮಾಡಿರುವ ಸಲ್ಮಾನ್, ಆ ಅಧಿಕಾರಿ ನನ್ನನ್ನು‌ ಕನ್ನಡದಲ್ಲಿ ಮಾತನಾಡುವಂತೆ ಹೇಳಿದರು. ಈ ಅಧಿಕಾರಿ ಅನಕ್ಷರಸ್ಥ. ಇಂಥ ಅನಕ್ಷರಸ್ಥರಿಂದಾನೇ ದೇಶ ಉದ್ಧಾರ ಆಗ್ತಾ ಇಲ್ಲ. ಹುಟ್ಟಿರುವುದು ಬೆಂಗಳೂರಿನಲ್ಲಿ, ನಿಮ್ಮ ತಂದೆ ಹುಟ್ಟಿರುವುದು ಬೆಂಗಳೂರಿನಲ್ಲಿ ಕನ್ನಡ ಬರುವುದಿಲ್ಲವಾ ಎಂದರೆ ಹೇಗೆ..? ಎಂದು ಆ ಅಧಿಕಾರಿ ಪ್ರಶ್ನಿಸಿದರು. ನಾನು ಹುಟ್ಟಿದ್ದು ಬೆಂಗಳೂರಿನಲ್ಲಿ ಮಾತ್ರ. ಬೆಳೆದಿದ್ದು ಸೌದಿಯಲ್ಲಿ ಹಾಗಾಗಿ ಕನ್ನಡ ಕಲಿತಿಲ್ಲ.

https://www.instagram.com/tv/CpyKFXEBHWm/?igshid=YmMyMTA2M2Y=

ಬೆಂಗಳೂರಿನಲ್ಲಿ ಹುಟ್ಟಿದ ಮಾತ್ರಕ್ಕೆ ಕನ್ನಡ ಬರಲೇಬೇಕೆಂಬ ನಿಯಮವಿದೆಯೇ. ನಾನು ಬೆಂಗಳೂರಿನವನೇ. ಆದರೆ ವಿಶ್ವದ ನಾನಾ ಕಡೆ ಟ್ರಾವೆಲ್ ಮಾಡುವ ಹಕ್ಕು ನನಗಿದೆ. ನಮ್ಮ ಮಾತೃಭಾಷೆ ಹಿಂದಿ. ಆ ಭಾಷೆ‌ ನನಗೆ ಬರುತ್ತದೆ. ಪ್ರಧಾನಿ ಮೋದಿಜೀಗೆ ಕನ್ನಡ ಮಾತನಾಡಲು ಬರುತ್ತದೆಯೇ ಎಂದು ಪ್ರಶ್ನಿಸಿದ್ದಾನೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...