ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಇತ್ತೀಚೆಗೆ ಬಿಜೆಪಿ ಮೇಲೆ ಬಹಿರಂಗವಾಗಿಯೇ ಹೌಹಾರಿದ್ದಾರೆ. ಇದು ಬಿಜೆಪಿ ನಾಯಕರಿಗೆ ಮುಜುಗರ ತಂದಿದೆ. ಹೀಗಾಗಿ ಬಿಎಸ್ ಯಡಿಯೂರಪ್ಪ ಮೂಲಕ ಅವರನ್ನು ಸರಿದಾರಿಗೆ ತರುವುದಕ್ಕೆ ಯತ್ನಿಸಿದ್ದಾರೆ. ಅದರಂತೆ ಇಂದು ಮಾಜಿ ಸಿಎಂ ಬಿಎಸ್ವೈ, ರೇಣುಕಾಚಾರ್ಯ ಅವರನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ.
ತಮ್ಮ ಮನೆಗೆ ರೇಣುಕಾಚಾರ್ಯ ಅವರನ್ನು ಕರೆಸಿಕೊಂಡ ಬಿಎಸ್ ಯಡಿಯೂರಪ್ಪ ಅವರು ಕಿವಿ ಮಾತು ಹೇಳಿದ್ದಾರೆ. ಚುನಾವಣೆಯಲ್ಲಿ ನಮಗೆ ಸೋಲಾಗಿರೋದು ನಿಜ. ಪಕ್ಷದಲ್ಲಿ ಸಣ್ಣಪುಟ್ಟ ಆಂತರಿಕ ಸಮಸ್ಯೆಗಳು ಇರೋದು ನಿಜ. ಆದರೆ ನಾವು ಅದನ್ನು ಪಕ್ಷದ ವೇದಿಕೆಯಲ್ಲಿ ಕೂತು ಸರಿಪಡಿಸಿಕೊಳ್ಳಬೇಕೇ ವಿನಃ ಬಹಿರಂಗವಾಗಿ ಹೇಳಿಕೆ ನೀಡಬಾರದು. ಇದರಿಂದ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಯಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ ಎನ್ನಲಾಗಿದೆ.
ಇನ್ನು ಮಾಜಿ ಶಾಸಕ ರೇಣುಕಾಚಾರ್ಯ ಬಸವರಾಜ್ ಬೊಮ್ಮಾಯಿ, ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಪಕ್ಷದ ಶಿಸ್ತು ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶೋಕಾಸ್ ನೋಟೀಸ್ ಜಾರಿ ಮಾಡಲಾಗಿತ್ತು.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್