Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಕ್ಷದಿಂದ ಶೋಕಾಸ್ ನೋಟೀಸ್.. ತಮ್ಮ ಶಿಷ್ಯಗೆ ಕಿವಿ ಮಾತು ಹೇಳಿದ ಬಿಎಸ್ವೈ..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಇತ್ತೀಚೆಗೆ ಬಿಜೆಪಿ ಮೇಲೆ ಬಹಿರಂಗವಾಗಿಯೇ ಹೌಹಾರಿದ್ದಾರೆ. ಇದು ಬಿಜೆಪಿ ನಾಯಕರಿಗೆ ಮುಜುಗರ ತಂದಿದೆ. ಹೀಗಾಗಿ ಬಿಎಸ್ ಯಡಿಯೂರಪ್ಪ ಮೂಲಕ ಅವರನ್ನು ಸರಿದಾರಿಗೆ ತರುವುದಕ್ಕೆ ಯತ್ನಿಸಿದ್ದಾರೆ. ಅದರಂತೆ ಇಂದು ಮಾಜಿ ಸಿಎಂ ಬಿಎಸ್ವೈ, ರೇಣುಕಾಚಾರ್ಯ ಅವರನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ.

ತಮ್ಮ ಮನೆಗೆ ರೇಣುಕಾಚಾರ್ಯ ಅವರನ್ನು ಕರೆಸಿಕೊಂಡ ಬಿಎಸ್ ಯಡಿಯೂರಪ್ಪ ಅವರು ಕಿವಿ ಮಾತು ಹೇಳಿದ್ದಾರೆ. ಚುನಾವಣೆಯಲ್ಲಿ ನಮಗೆ ಸೋಲಾಗಿರೋದು ನಿಜ. ಪಕ್ಷದಲ್ಲಿ ಸಣ್ಣಪುಟ್ಟ ಆಂತರಿಕ ಸಮಸ್ಯೆಗಳು ಇರೋದು ನಿಜ. ಆದರೆ ನಾವು ಅದನ್ನು ಪಕ್ಷದ ವೇದಿಕೆಯಲ್ಲಿ ಕೂತು ಸರಿಪಡಿಸಿಕೊಳ್ಳಬೇಕೇ ವಿನಃ ಬಹಿರಂಗವಾಗಿ ಹೇಳಿಕೆ ನೀಡಬಾರದು. ಇದರಿಂದ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಯಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ ಎನ್ನಲಾಗಿದೆ.

ಇನ್ನು ಮಾಜಿ ಶಾಸಕ ರೇಣುಕಾಚಾರ್ಯ ಬಸವರಾಜ್ ಬೊಮ್ಮಾಯಿ, ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಪಕ್ಷದ ಶಿಸ್ತು ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶೋಕಾಸ್ ನೋಟೀಸ್ ಜಾರಿ‌ ಮಾಡಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!