Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜೃಂಭಣೆಯಿಂದ ನೆರವೇರಿದ ಶ್ರೀ ಚನ್ನಕೇಶವಸ್ವಾಮಿ ರಥೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 12 : ಕೆಳಗೋಟೆ ಸಿ.ಕೆ.ಪುರದಲ್ಲಿರುವ ಶ್ರೀ ಚನ್ನಕೇಶವಸ್ವಾಮಿಯ ಶ್ರೀದೇವಿ ಭೂದೇವಿ ಸಹಿತ ಕಲ್ಯಾಣೋತ್ಸವ ಹಾಗೂ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಬಗೆ ಬಗೆಯ ಹೂವು, ಹಾರ, ಹಸಿರು ಪತ್ರೆ, ಮಾವಿನ ತಳಿರಿನಿಂದ ರಥವನ್ನು ಸಿಂಗರಿಸಲಾಗಿತ್ತು. ಶ್ರೀದೇವಿ ಭೂದೇವಿಯನ್ನು ವಿಶೇಷವಾಗಿ ಅಲಂಕರಿಸಿ ರಥದಲ್ಲಿ ಕೂರಿಸಿ ಪೂಜೆ ಸಲ್ಲಿಸಿದ ನಂತರ ರಥವನ್ನು ನೂರಾರು ಭಕ್ತರು ಎಳೆದರು. ರಥೋತ್ಸವದಲ್ಲಿ ಮಂಡಕ್ಕಿ ತೂರಿ ಕೆಲವರು ಭಕ್ತಿ ಸಮರ್ಪಿಸಿದರು.

ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಚನ್ನಕೇಶವಸ್ವಾಮಿ ದೇವಸ್ಥಾನದ ಸಂಚಾಲಕ, ಹಿರಿಯ ನ್ಯಾಯವಾದಿ ಫಾತ್ಯರಾಜನ್, ನಗರಸಭೆ ಮಾಜಿ ಸದಸ್ಯರುಗಳಾದ ಪಿ.ತಿಪ್ಪೇಸ್ವಾಮಿ, ಡಿ.ಪ್ರಕಾಶ್, ಆರ್.ವಿ.ಮಾರುತೇಶ್‍ರೆಡ್ಡಿ, ಗಂಗಾಧರ್, ಜಗನ್ನಾಥ, ಗೌಡ, ಗಿರೀಶ, ಹನುಮಂತರೆಡ್ಡಿ, ಸನ್ನಿ ಇನ್ನು ಅನೇಕರು ರಥೋತ್ಸವದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...