ವಿಜೃಂಭಣೆಯಿಂದ ಜರುಗಿದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ಕಾರ್ತಿಕೋತ್ಸವದ ರಥೋತ್ಸವ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

 

ಸುದ್ದಿಒನ್, ನಾಯಕನಹಟ್ಟಿ : ವೀರಗಾಸೆ ಡೊಳ್ಳು ಕುಣಿತ ಕಲಾ ತಂಡ ಮಂಗಳವಾದ್ಯಗಳೊಂದಿಗೆ  ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ಕಾರ್ತಿಕೋತ್ಸವದ ರಥೋತ್ಸವ ಸಂಭ್ರಮದಿಂದ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.

ಪಟ್ಟಣದ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ಕಾರ್ತಿಕೋತ್ಸವ ಶುಕ್ರವಾರ ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಮಧ್ಯಾಹ್ನ 3:30ರ ಗಂಟೆಗೆ ರಥೋತ್ಸವಕ್ಕೆ  ಚಾಲನೆಯನ್ನು ನೀಡಿದರು

ಸುಮಾರು 30 ಅಡಿ ಮರದಿಂದ ನಿರ್ಮಿಸಿದ ರಥದ ಮೇಲ್ಭಾಗದಲ್ಲಿ ಕಮಾನಿನಾಕಾರದ ರಥ ಪ್ರಮುಖ ಆಕರ್ಷಣೆಯಾಗಿತ್ತು.‌ ನಾನಾ ಬಣ್ಣದ ಬಟ್ಟೆ ಹಾಗೂ ಬಾವುಟಗಳಿಂದ ರಥವನ್ನು ಅಲಂಕರಿಸಲಾಗಿತ್ತು.
ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು ಮಹಾಮಂಗಳಾರತಿ ನಂತರ ಉತ್ಸವ ಆರಂಭಗೊಂಡಿತು. ಚಿನ್ನದ ಕಿರೀಟ ಚಿನ್ನದ ಆಭರಣಗಳು ಮಲ್ಲಿಗೆ ಕನಕಾಂಬರ ಸೇವಂತಿ ಚೆಂಡು ಹೂವು ಸೇರಿದಂತೆ ನಾನ ಹೂಗಳಿಂದ ಉತ್ಸವ ಮೂರ್ತಿಯ ಅಲಂಕರಿಸಲಾಗಿತ್ತು.

ರಥಕ್ಕೆ ಅಳವಡಿಸಿದ್ದ ಬೃಹತ್ ಹೂವಿನ ಹಾರಗಳು ಗಮನ ಸೆಳೆದವು ಉತ್ಸವ ಬೀದಿಯಲ್ಲಿ ರಥ ಚಲಿಸುವಾಗ ಮಹಿಳೆಯರು ದಾರಿಗೆ ನೀರು ಹಾಕಿ ಸ್ವಚ್ಛಗೊಳಿಸಿ ಕಾಯಿ ಹಣ್ಣು ಹರಕೆ ಸಮರ್ಪಿಸಿದರು..

ಭಕ್ತರು  ಹರಕೆ ಸಲ್ಲಿಸಿದರು ದೇವಾಲಯದ ಅಲಂಕೃತ ಪಟ್ಟದ ಬಸವಣ್ಣನನ್ನು ಬೆಳ್ಳಿಯ ಕಾಲು ಕಡಗ ಅಣೆಪಟ್ಟಿಗಳಿಂದ ಅಲಂಕರಿಸಲಾಗಿತ್ತು ಸಾಂಪ್ರದಾಯಿಕ ಮಂಗಳವಾದ್ಯಗಳು ಉತ್ಸವದಲ್ಲಿದ್ದವು.

ಇದೇ ಸಂದರ್ಭದಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್ ಗಂಗಾಧರಪ್ಪ,  ಎಸ್ ಸತೀಶ್, ಗ್ರಾಮಸ್ಥರಾದ ಎಂ. ವೈ. ಟಿ ಸ್ವಾಮಿ, ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಎನ್ ಮಹಾಂತಣ್ಣ, ಜೀವಿತ್ ಕುಮಾರ್, ಗಂಗಣ್ಣ ಉಮೇಶ್  ದಳವಾಯಿ ರುದ್ರಮುನಿ, ಸುನಿಲ್ ಕುಮಾರ್, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸಿಬ್ಬಂದಿಗಳು ಮತ್ತು ಅರ್ಚಕರಾದ ರವಿಕುಮಾರ್, ಅಭಿಷೇಕ್, ಪಟ್ಟಣದ ಸಮಸ್ತ ಭಕ್ತಾದಿಗಳು ನಾಯಕನಹಟ್ಟಿ ಹೋಬಳಿಯ ವಿವಿಧ ಹಳ್ಳಿಗಳ ಗ್ರಾಮಸ್ಥರು ಭಕ್ತಾದಿಗಳು ಉಪಸ್ಥಿತರಿದ್ದರು.

suddionenews

Recent Posts

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

1 minute ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

12 minutes ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

20 minutes ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

22 minutes ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

30 minutes ago

ಹೊಳಲ್ಕೆರೆ | ಫೆಬ್ರವರಿ 26 ರಿಂದ ಮಾರ್ಚ್ 01 ರವರೆಗೆ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

60 minutes ago