Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶ್ರೀ ಶನಿ ದೇವರ ಪೂಜಾ ಕಾರ್ಯಕ್ರಮ 12ನೇ ವರ್ಷದ ವಾರ್ಷಿಕೋತ್ಸವ ಹಾಗೂ ಅನ್ನ ದಾಸೋಹ

---Advertisement---

 

ಸುದ್ದಿಒನ್, ಗುಬ್ಬಿ, ಆಗಸ್ಟ್. 10 : ತಾಲೂಕಿನ ನಡುವಲಪಾಳ್ಯದಲ್ಲಿ ಶನೇಶ್ವರ ಸ್ವಾಮಿಯ 12ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿಶೇಷ ಅಲಂಕಾರ ಮಾಡಿ ಬಹಳ ಅದ್ದೂರಿಯಾಗಿ ಪೂಜಾ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಬಸವರಾಜು ಮಾತನಾಡಿ ಶ್ರಾವಣ ಮಾಸದ ದಿನ ಬಹಳ ವಿಶೇಷವಾಗಿ ನಡುಲಪಾಳ್ಯ, ಚಿಕ್ಕೋನಹಳ್ಳಿ, ಕಡೆಪಾಳ್ಯ ಗ್ರಾಮಸ್ಥರು ಸೇರಿ ದವಸಧಾನ್ಯ ತಂದು ಗ್ರಾಮಸ್ಥರೇ ಸೇರಿ ಅಡುಗೆ ಮಾಡಿ ಶ್ರೀ ಶನೇಶ್ವರಸ್ವಾಮಿ ಸನ್ನಿದಿಯಲ್ಲಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಿರುತ್ತಾರೆ. ಈ ದಿನ ಸುಮಾರು ಮೂರರಿಂದ ನಾಲ್ಕು ಸಾವಿರ ಜನಗೆ ಊಟದ ವ್ಯವಸ್ಥೆ ಏರ್ಪಡಿಸುತ್ತಾರೆ.
ಪ್ರಾತಃಕಾಲದಲ್ಲಿ ಅಭಿಷೇಕ, ಗಂಗಾವತರಣ,ಗಣಪತಿ ಪೂಜೆ, ಪಂಚಾಮೃತ ಅಭಿಷೇಕ, ಹೂವಿನಿಂದ ಅಲಂಕರಿಸಿ ಮಹಾ ಮಂಗಳಾರತಿ ಮಾಡಲಾಗುತ್ತದೆ ಎಂದು ತಿಳಿಸಿದರು.

ರೈತ ಸಂಘದ ಲೋಕೇಶ್ ಮಾತನಾಡಿ, ಮೂರ್ನಾಲ್ಕು ಊರುಗಳ ಗ್ರಾಮಸ್ಥರ ಸಹಕಾರದಿಂದ ಪ್ರತಿವರ್ಷ ಬಹಳ ವಿಜೃಂಭಣೆಯಾಗಿ ಜಾತ್ರೆಯ ರೂಪದಲ್ಲಿ ಯಾವುದೇ ಜಾತಿ ಮತ ಭೇದವಿಲ್ಲದೆ ಎಲ್ಲರೂ ಒಗ್ಗೂಡಿ ಶನೇಶ್ವರನಿಗೆ ಪೂಜಾ ಕಾರ್ಯಕ್ರಮ ನಡೆಯುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಳ್ಳುಕಟ್ಟೆಗೌಡ, ರಾಜಣ್ಣಗೌಡ, ರಾಜಣ್ಣ, ಶಿವಣ್ಣ, ಬಸವರಾಜು, ಸಣ್ಣ ಸಿದ್ದೇಗೌಡ, ಹುಚ್ಚಪ್ಪ, ಪ್ರದಾನ ಅರ್ಚಕರಾದ ಗೌರಿಶಂಕರ್, ಉಮಾ ಗಿರೀಶ್ ಆಚಾರ್ ಕುಟುಂಬಸ್ಥರು ಹಾಗೂ ಭಕ್ತಾದಿಗಳು, ಗ್ರಾಮಸ್ಥರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...