Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

---Advertisement---

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ ಈಡಾಗುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಂಡಿಲ್ಲ ಎಂದು ಇದೀಗ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಬಿಟ್ಟಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ದಾದಾ ಪೀರ್ ಮಾಡಿರುವ ವಿಡಿಯೋದಲ್ಲಿ ಏನಿದೆ ?
ಜನನಿಬಿಡ ಪ್ರದೇಶದಲ್ಲಿ ಗೋವುಗಳನ್ನು ಕೊಯ್ದು ಗಲೀಜು ಮಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಹಿರಿಯೂರು ನಗರದಲ್ಲಿ ಅಟ್ಟಹಾಸ ಮುಂದುವರೆದಿದ್ದು, ಯಾರು ಹೇಳೋರು ಕೇಳೋರು ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.

ಹಿರಿಯೂರು ಪೊಲೀಸ್ ಇಲಾಖೆಯಿಂದ ಜಿಲ್ಲಾ ಎಸ್ಪಿ ಕಛೇರಿವರೆಗೂ, ನಗರಸಭೆಯಿಂದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೂ ಅರ್ಜಿ, ದೂರು ಕೊಟ್ಟಿದ್ದೆ. ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆದರೆ ಅದು ಭರವಸೆಯಾಗಿಯೇ ಉಳಿಯಿತು. ಎರಡು ದಿನ ನಿಲ್ಲಿಸುತ್ತಾರೆ. ನಂತರ ಮತ್ತೆ ಮೊದಲಿನಂತೆ ಕಸಾಯಿ ಖಾನೆ ನಡೆಯುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಯಾರು ಸಹ ಜಾಗರೂಕತೆಯಿಂದ ಕ್ರಮ ಕೈಗೊಳ್ಳದೇ ಬೇಕಾಬಿಟ್ಟಿಯಾಗಿದ್ದು, ಹಿರಿಯೂರಿನಲ್ಲಿ ಅಟ್ಟಹಾಸ ಮಿತಿಮೀರಿದೆ. ಜನರ ಆರೋಗ್ಯ ದೃಷ್ಟಿಯಿಂದ ಈಗಲಾದರೂ ಇದರ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

 

ಇದುವರೆಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಮಾಧ್ಯಮಗಳ ಮೂಲಕವಾದರೂ ಇಂತಹ ಅಕ್ರಮ ಕಸಾಯಿಖಾನೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು. ಕಾನೂನಿನ ಮೂಲಕವಾದರೂ ಸಹ ಕಸಾಯಿ ಖಾನೆಯನ್ನು ತೆರವು ಗೊಳಿಸಬೇಕು. ನಮ್ಮ ವಾರ್ಡ್ ನಲ್ಲಿ ಇದರಿಂದ ಮಕ್ಕಳ ಮೇಲೆ ಆರೋಗ್ಯದ ದುಷ್ಪರಿಣಾಮ ಬೀರುವ ಸಾಧ್ಯತೆಯಿದ್ದು ಮರಣ ಹೊಂದುವ ಸಾಧ್ಯತೆ ಇರುತ್ತದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದಾದಾಪೀರ್ ವಿನಂತಿ ಮಾಡಿಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment