Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪನವರಿಗೆ ಸಿದ್ದರಾಮ ಸಾಹಿತ್ಯ ಪ್ರಶಸ್ತಿ ಪ್ರದಾನ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.18): ಕರ್ನಾಟಕ ರಾಜ್ಯದ ನೊಳಂಬ ಲಿಂಗಾಯತ ಸಂಘ 12 ನೇ ಶತಮಾನದ ಶರಣ ಸಿದ್ದರಾಮೇಶ್ವರನ ಸಾಹಿತ್ಯ ಕುರಿತು ಕೆಲಸ ಮಾಡಿದವರಿಗೆ ಕೊಡ ಮಾಡುವ ಸಿದ್ದರಾಮ ಸಾಹಿತ್ಯ ವಿಶೇಷ ಪ್ರಶಸ್ತಿ ಚಿತ್ರದುರ್ಗದ ಇತಿಹಾಸ ಸಂಶೋಧಕ ಹಾಗೂ ಶಾಸನತಜ್ಞ ಡಾ.ಬಿ.ರಾಜಶೇಖರಪ್ಪನವರಿಗೆ ಲಭಿಸಿದೆ.

ಕಳೆದ 14 ರಂದು ತಿಪಟೂರಿನಲ್ಲಿ ನಡೆದ ಶ್ರೀ ಗುರುಸಿದ್ದರಾಮೇಶ್ವರರ 850 ನೇ ಜಯಂತಿ ಸುವರ್ಣ ಮಹೋತ್ಸವ-2023 ರ ಅಂಗವಾಗಿ ಏರ್ಪಡಿಸಿದ್ದ ಸಮ್ಮೇಳನದಲ್ಲಿ ಡಾ.ಬಿ.ರಾಜಶೇಖರಪ್ಪನವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೆರೆಗೋಡಿ ರಂಗಾಪುರ ಮಠದ ಪರದೇಶಿಕೇಂದ್ರ ಮಹಾಸ್ವಾಮಿ, ಸಿರಿಗೆರೆಯ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಮಂತ್ರಿ ಶೋಭ ಕರಂದ್ಲಾಜೆ, ಶಿಕ್ಷಣ ಮಂತ್ರಿ ಬಿ.ಸಿ.ನಾಗೇಶ್ ಇವರುಗಳು ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಿದರು.

ಪ್ರಶಸ್ತಿಯು ಹತ್ತು ಸಾವಿರ ರೂ.ನಗದು, ಸನ್ಮಾನ ಪತ್ರ, ಸ್ಮರಣಿಕೆ ಒಳಗೊಂಡಿದೆ.
ಕೆರೆಗೋಡಿ ರಂಗಾಪುರ ಮಠದ 89 ವರ್ಷದ ಎಸ್.ಪರಶಿವಮೂರ್ತಿ ಮತ್ತು ಅವರ ಮಗ ಶಿವಕುಮಾರ್ ಹಾಗೂ ಚಂದ್ರಶೇಖರ್ ಇವರುಗಳು ತಮ್ಮ ತಾಯಿ ತಂದೆಯರ ಹೆಸರಿನಲ್ಲಿ ಸ್ಥಾಪಿಸಿರುವ ಟ್ರಸ್ಟ್ ಮೂಲಕ ಹಲವು ವರ್ಷಗಳಿಂದಲೂ ಸಿದ್ದರಾಮ ಸಾಹಿತ್ಯ ವಿಶೇಷ ಪ್ರಶಸ್ತಿಯನ್ನು ನೀಡುತ್ತಾ ಬರುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!