ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಪ್ರಚಾರದ ಜೊತೆಗೆ ಹಲವು ಮಹತ್ವದ ಬದಲಾವಣೆಗಳು ನಡೆದಿವೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದ ಶ್ರೀನಿವಾಸ್ ಪ್ರಸಾದ್ ನಡುವೆ ಹಳೆಯ ಸ್ನೇಹ ಮುಂದುವರೆದಿದೆ. ಈ ಮಹತ್ವದ ಬೆಳವಣಿಗೆಗೆ ಸಿದ್ದರಾಮಯ್ಯ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಪ್ತರಾಗಿದ್ದರು. ಆದರೆ ಕಳೆದ ಆರು ವರ್ಷದಿಂದ ಸಂಸದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ಅವರಿಂದ ದೂರ ಉಳಿದಿದ್ದರು. ಇದೀಗ ಆ ಸ್ನೇಹ ಮತ್ತೆ ಚಿಗುರೊಡೆದಿದೆ. ಇಂದು ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ. ಜಯ ಲಕ್ಷ್ಮೀಪುರಂನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಬಾರಿ ಚರ್ಚೆಯಾಗುತ್ತಿದ್ದು, ಸದ್ಯ ಶ್ರೀನಿವಾಸ್ ಪ್ರಸಾದ್ ಯಾರ ಪರವಾಗಿ ನಿಲ್ಲಬಹುದು ಎಂಬ ಪ್ರಶ್ನೆ ಎದ್ದಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್ ಭೇಟಿಗೂ ಹಲವು ಕಾರಣಗಳಿವೆ. ಈಗಾಗಲೇ ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬಕ್ಕೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದೆ. ಹೀಗಾಗಿ ಮಕ್ಕಳು, ಮೊಮ್ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆಯೂ ಮನವರಿಕೆ ಮಾಡಲಾಗಿದೆ. ಕಾಂಗ್ರೆಸ್ ನಿಂದ ಸುನೀಲ್ ಬೋಸ್ ಅವರು ಅಭ್ಯರ್ಥಿಯಾಗಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರುವ ಸವಾಲು ಕಾಂಗ್ರೆಸ್ ಗಿದೆ. ಮೈಸೂರು ಭಾಗದಲ್ಲಿ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳನ್ನು ಕಾಂಗ್ರೆಸ್ ನತ್ತ ಸೆಳೆದರೆ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗಲಿದೆ. ಮುಂದಿನ ದಿನಗಳಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎನ್ನಲಾಗಿದ್ದು, ಈ ಮೂಲಕ ದೋಸ್ತಿ ಮುಂದಿವರೆಸುವ ಇಂಗಿತ ವ್ಯಕ್ಯಪಡಿಸಿದ್ದಾರೆ ಎನ್ನುತ್ತಿವೆ ಮೂಲಗಳು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್