Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

6 ವರ್ಷದ ಮುನಿಸು ಮರೆತು ಒಂದಾದ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್

---Advertisement---

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಪ್ರಚಾರದ ಜೊತೆಗೆ ಹಲವು ಮಹತ್ವದ ಬದಲಾವಣೆಗಳು ನಡೆದಿವೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದ ಶ್ರೀನಿವಾಸ್ ಪ್ರಸಾದ್ ನಡುವೆ ಹಳೆಯ ಸ್ನೇಹ ಮುಂದುವರೆದಿದೆ. ಈ ಮಹತ್ವದ ಬೆಳವಣಿಗೆಗೆ ಸಿದ್ದರಾಮಯ್ಯ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಪ್ತರಾಗಿದ್ದರು. ಆದರೆ ಕಳೆದ ಆರು ವರ್ಷದಿಂದ ಸಂಸದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ಅವರಿಂದ ದೂರ ಉಳಿದಿದ್ದರು. ಇದೀಗ ಆ ಸ್ನೇಹ ಮತ್ತೆ ಚಿಗುರೊಡೆದಿದೆ. ಇಂದು ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ. ಜಯ ಲಕ್ಷ್ಮೀಪುರಂನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಬಾರಿ ಚರ್ಚೆಯಾಗುತ್ತಿದ್ದು, ಸದ್ಯ ಶ್ರೀನಿವಾಸ್ ಪ್ರಸಾದ್ ಯಾರ ಪರವಾಗಿ ನಿಲ್ಲಬಹುದು ಎಂಬ ಪ್ರಶ್ನೆ ಎದ್ದಿದೆ.

 

ಸಿಎಂ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್ ಭೇಟಿಗೂ ಹಲವು ಕಾರಣಗಳಿವೆ. ಈಗಾಗಲೇ ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬಕ್ಕೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದೆ. ಹೀಗಾಗಿ ಮಕ್ಕಳು, ಮೊಮ್ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆಯೂ ಮನವರಿಕೆ ಮಾಡಲಾಗಿದೆ. ಕಾಂಗ್ರೆಸ್ ನಿಂದ ಸುನೀಲ್ ಬೋಸ್ ಅವರು ಅಭ್ಯರ್ಥಿಯಾಗಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರುವ ಸವಾಲು ಕಾಂಗ್ರೆಸ್ ಗಿದೆ. ಮೈಸೂರು ಭಾಗದಲ್ಲಿ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳನ್ನು ಕಾಂಗ್ರೆಸ್ ನತ್ತ ಸೆಳೆದರೆ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗಲಿದೆ. ಮುಂದಿನ ದಿನಗಳಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎನ್ನಲಾಗಿದ್ದು, ಈ ಮೂಲಕ ದೋಸ್ತಿ ಮುಂದಿವರೆಸುವ ಇಂಗಿತ ವ್ಯಕ್ಯಪಡಿಸಿದ್ದಾರೆ ಎನ್ನುತ್ತಿವೆ ಮೂಲಗಳು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment