Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವರನ್ನು ಹೆಚ್ಚು ನಂಬದ ಸಿದ್ದರಾಮಯ್ಯ ಈಗ ಒಂದು ಕಡೆ ನಿಲ್ಲುತ್ತಾರಾ..? ಎರಡು ಕಡೆನಾ..?

Facebook
Twitter
Telegram
WhatsApp

ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೇವಸ್ಥಾನಕ್ಕೆ ಹೋಗುತ್ತಾರೆ, ಪೂಜೆಯನ್ನು ಮಾಡಿಸುತ್ತಾರೆ. ಆದರೆ ಅತಿ ಹೆಚ್ಚಾಗಿ ನಂಬುವುದಿಲ್ಲ. ಅಲ್ಲೊಂದು ಮೂಢನಂಬಿಕೆಯಿದೆ ಎಂದರೆ ಅದನ್ನು ಮುರಿದಿರುವ ಉದಾಹರಣೆಯೂ ಇದೆ. ಹೀಗಿರುವಾಗ ಚುನಾವಣೆಯಲ್ಲಿ ಯಾವ ಥರದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದೇ ಕುತೂಹಲದ ವಿಚಾರವಾಗಿದೆ.

ಯಾಕಂದ್ರೆ ಸಿದ್ದರಾಮಯ್ಯ ಅವರ ಮನೆ ದೇವರಾದ ಚಿಕ್ಕಮ್ಮದೇವಿ, ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಭವಿಷ್ಯ ನುಡಿದಿದೆ. ಒಂದು ಕಡೆ ನಿಂತರೆ ಸೋಲು, ಎರಡು ಕಡೆ ನಿಲ್ಲಬೇಕು ಎಂದು ಸೂಚನೆ ನೀಡಿದೆ. ಈ ಸೂಚನೆಯನ್ನು ಸಿದ್ದರಾಮಯ್ಯ ಅವರು ಅನುಕರಣೆ ಮಾಡುತ್ತಾರಾ ಎಂಬ ಪ್ರಶ್ನೆ ಕಾಡುತ್ತಿದೆ.

ಈಗಾಗಲೇ ಕೋಲಾರದಿಂದಾನೇ ಸ್ಪರ್ಧೆ ಮಾಡುತ್ತೀನಿ ಎಂದು ಘೋಷಣೆ ಮಾಡಿರುವ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ಚೊಟ್ಟನಹಳ್ಳಿಯಲ್ಲಿರುವ ಆದಿನಾಡು ಚಿಕ್ಕಮ್ಮದೇವಿಗೆ ವಿಶೇಷ ಪೂಜೆ ಮಾಡಿಸಲು ಹೋಗಿದ್ದರು. ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕೂಡ ಜೊತೆಗೆ ಇದ್ದರು. ಈ ವೇಳೆ ಅರ್ಚಕ ಲಿಂಗಣ್ಣ ಅವರ ಮೈಮೇಲೆ ದೇವರು ಬಂದಿದೆ. ಆಗ ನಿಮಗೆ ಪ್ರಬಲ ಶಕ್ತಿಗಳ ವಿರೋಧವಿದೆ. ಒಂದು ಕಡೆ ಬಾಹುಬಲ ಚಾಚಿದ್ರೆ ಪ್ರಯೋಜವಾಗಲ್ಲ, ಎರಡು ಕಡೆ ಬಾಹುಬಲ ಚಾಚಬೇಕು. ಅರ್ಥ ಆಯ್ತೇನಪ್ಪ ಎಂದು ಮೈಮೇಲೆ ಬಂದ ದೇವರು ಸೂಚನೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!