Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಾಪಗ್ರಸ್ಥ ಜಿಲ್ಲೆ ಎಂದೇ ಖ್ಯಾತಿ ಪಡೆದಿರೋ ಚಾಮರಾಜನಗರ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸಂಪುಟ ಸಭೆ..!

---Advertisement---

ಚಾಮರಾಜನಗರ: ಮೂಢನಂಬಿಕೆಗಳಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಕೊಂಚ ದೂರವೇ ಉಳಿದಿದ್ದಾರೆ. ಕಷ್ಟಪಟ್ಟು ಕೆಲಸ ಮಾಡಿದರೆ ಫಲ ಸಿಗಲಿದೆ ಎಂಬ ನಂಬಿಕೆ ಅವರದ್ದು. ಚಾಮರಾಜನಗರ ಜಿಲ್ಲೆಗೆ ಭೇಟಿ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮಾತಿದೆ. ಈ ಕಾತಣಕ್ಕಾಗಿಯೇ ಚಾಮರಾಜನಗರದತ್ತ ರಾಜಕಾರಣಿಗಳು ಅಷ್ಟಾಗಿ ಸುಳಿಯುವುದಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರು ಆ ರೀತಿ ಅಲ್ಲ. ಈಗಾಗಲೇ ಆ ಮೂಢನಂಬಿಕೆಗಳಿಗೆ ಸೆಡ್ಡು ಹೊಡೆದಿದ್ದಾರೆ. ಇದೀಗ ಶಾಪಗ್ರಸ್ಥ ಜಿಲ್ಲೆಯೆಂದೇ ಖ್ಯಾತಿ ಪಡೆದಿದೆ. ಇಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಮಾಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಾರಿ ಫೆಬ್ರವರಿ 15ರಂದು ಸಂಪುಟ ಸಭೆ ನಡೆಸಲಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಯ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ನಿವಾರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ.

ನಗರ ಹಾಗೂ ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲ ಸೌಕರ್ಯ, ಹಾಡಿ ಜನರಿಗೆ ಮೂಲ ಸೌಕರ್ಯ ಒದಗಿಸುವ ಕುರಿತು ಚರ್ಚೆ ನಡೆಸಿ, ಪರಿಹಾರ ನೀಡುವ ನಿರೀಕ್ಷೆ ಇದೆ. ಈ ಹಿಂದೆ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಚಾಮರಾಜನಗರದಲ್ಲಿ ಮಿನಿ ಸಂಪುಟ ಸಭೆ ನಡೆದಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...