Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ಭಾಷೆ ಉಳಿಸಲು ಮುಂದಾದ ಸಿದ್ದರಾಮಯ್ಯ: ಪರಭಾಷಿಗರಿಗೂ ಕನ್ನಡ ಕಡ್ಡಾಯವೆಂದ್ರು ಸಿಎಂ

Facebook
Twitter
Telegram
WhatsApp

ಬೆಂಗಳೂರು: ಕರ್ನಾಟಕದಲ್ಲಿಯೇ ಕನ್ನಡ ಭಾಷೆಗೆ ಸಂಕಷ್ಟ ಇರುವುದು ಹೊಸ ವಿಚಾರವೇನು ಅಲ್ಲ. ಎಲ್ಲಿ ನೋಡಿದರೂ ನಮ್ಮವರೇ ಬೇರೆ ಭಾಷೆಯನ್ನೇ ಹೆಚ್ಚಾಗಿ ಮಾತನಾಡುತ್ತಾರೆ. ನವೆಂಬರ್ ಬಂತು ಅಂದ್ರೆ ಕನ್ನಡಕ್ಕಾಗಿ ಕೈ ಎತ್ತುವವರ ಸಂಖ್ಯೆ ಹೆಚ್ಚಾಗುತ್ತದೆ.‌ ಆದರೆ ಈಗ ಸಿದ್ದರಾಮಯ್ಯ ಅವರು ಕನ್ನಡ ಉಳಿಸುವ ನಿಟ್ಟಿನಲ್ಲಿ ಒಂದು ಆದೇಶ ನೀಡಿದ್ದಾರೆ.

 

ಕರ್ನಾಟಕದಲ್ಲಿ ಪರಭಾಷಿಕರೇ ಹೆಚ್ಚು ವಾಸ ಮಾಡುತ್ತಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅವರೇ ಇದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ನೆಲೆಸುವ ಪರಭಾಷಿಗರು ಕೂಡ ಕಡ್ಡಾಯವಾಗಿ ಕನ್ನಡ ಕಲಿಯಬೇಕು ಎಂದಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಸಂರಕ್ಷಣೆ ಮಾಡಿಕೊಂಡು ಹೋಗಬೇಕಾ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಾಗಿದೆ. ಇದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕವಾಗಿದೆ.

 

ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೇ ಬದುಕುವ ವಾತಾವರಣ ಕರ್ನಾಟಕದಲ್ಲಿದೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ. ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ. ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲರೂ ಕನ್ನಡವನ್ನು ಕಲಿಯಲೇಬೇಕು. ಹಾಗೆಂದು ನಾವು ಸುಮ್ಮನಿರುವಂತಿಲ್ಲ. ಕನ್ನಡಿಗರು ದುರಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿ ದುರಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗ್ಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಭುವನೇಶ್ವರಿ ತಾಯಿ ಎಲ್ಲರಿಗೂ ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಪೂರ್ತಿ ಕೊಡಲಿ ಎಂದು ಆಶಿಸುತ್ತೇನೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!