Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರಿಗೆ ಹುಟ್ಟಿದ ದಿನವೇ ಗೊತ್ತಿರಲಿಲ್ಲ, ಈಗ ಹೇಗೆ ಗೊತ್ತಾಯ್ತು : ಸಚಿವ ಮುನಿರತ್ನ

Facebook
Twitter
Telegram
WhatsApp

ಬೆಂಗಳೂರು: ಸಚಿವ ಮುನಿರತ್ನ ಸುದ್ದಿಗೋಷ್ಟಿಯಲ್ಲಿ ಸಿದ್ದರಾಮೋತ್ಸವ ವಿಚಾರವಾಗಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರು ಒಂದು ಉತ್ಸವ ಆಚರಣೆ ಮಾಡಿಕೊಂಡ್ರೂ ಅಚ್ಚರಿ ಇಲ್ಲ. ಸಿದ್ದರಾಮಯ್ಯ ಅವರಿಗೆ ಹುಟ್ಟಿದ ದಿನವೇ ಗೊತ್ತಿಲ್ಲ. ಸಿದ್ದರಾಮಣ್ಣ ಹುಟ್ಟಿದ ದಿನದ ಶುಭಾಷಯ ಅಂದ್ರೆ.. ಏಯ್ ಹೋಗೋ ನನಗೆ ಹುಟ್ಟಿದ ದಿನವೇ ಗೊತ್ತಿಲ್ಲ ಅಂತಿದ್ರು. ಆದ್ರೀಗ, ಇದ್ದಕ್ಕಿದ್ದಂತೆ ಆಗಸ್ಟ್ 3 ಅಂತಲೇ ಹೇಗೆ ತಿಳಿಯಿತೋ ಗೊತ್ತಿಲ್ಲ. ಈ ಹುಟ್ಟುಹಬ್ಬ ಅವರು ಮಾಡಿಕೊಳ್ಳುತ್ತಿರೋದಲ್ಲ. ಅವರ ಅಕ್ಕಪಕ್ಕದಲ್ಲಿ ಇರುವವರು ಮಾಡುತ್ತಿರೋದು. ಅವರೆಲ್ಲಾ ಯಾರು ಅಂತ ನಿಮಗೆ ಗೊತ್ತು. ನೀವೇ ತಿಳಿದುಕೊಳ್ಳಿ ಎಂದಿದ್ದಾರೆ.

ಈದ್ಗಾ ಮೈದಾನ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಮಾತನಾಡಿ, ಇದು ಸರ್ಕಾರ, ಪಾಲಿಕೆ, ಈದ್ಗಾ ವಿಚಾರವಾಗಿದೆ. ದಾಖಲೆ ಪರಿಶೀಲಿಸಿ ಚರ್ಚೆ ಮಾಡಬೇಕಾಗುತ್ತೆ ಎಂದಿದ್ದಾರೆ.

ಇನ್ನು ಈ ಭಾರಿ ಫಲಪುಷ್ಪ ಪ್ರದರ್ಶನಕ್ಕೆ ಪುನೀತ್ ಹಾಗೂ ಗಾಜನೂರಿನ ಮನೆ ವಿಶೇಷವಾಗಿರುತ್ತದ. ನಮ್ಮ ಲಾಲ್ ಭಾಗ್ ಫ್ಲವರ್ ಶೋ ಕೋವಿಡ್‌ನಿಂದ ಕಾರ್ಯಕ್ರಮ ಮಾಡಿರಲಿಲ್ಲ. ಈ ಭಾರಿ ಆಗಸ್ಟ್‌ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡುತ್ತಿದ್ದೇವೆ. ಆಗಸ್ಟ್‌ 5-15ರ ವರೆಗೆ ಮಾಡಲು ನಿರ್ಧಾರ. ಈಗ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಇನ್ನೆರಡು ದಿನ ಮುಂದುವರೆಸಲು ನಿರ್ಧಾರ. ಬೇರೆ ದೇಶದಿಂದಲೂ ವಿಶೇಷ ಹೂ ಗಿಡಗಳನ್ನ ತರಿಸಲು ನಿರ್ಧಾರಿಸಿದ್ದೇವೆ. ಪುನೀತ್ ರಾಜ್ ಕುಮಾರ್ ಅವರ ಚಿತ್ರವನ್ನು ವಿಶೇಷವಾಗಿ ಮಾಡಲಿದ್ದೇವೆ. ರಾಜ್ ಕುಮಾರ್ ಅವರ ಗಾಜನೂರಿನ ಮನೆಯನ್ನ ಪ್ಲವರ್ ಡೆಕೋರೇಷನ್ ಮಾಡಲು ನಿರ್ಧಾರ ಮಾಡಿದ್ದೇವೆ. ಈ ಬಾರಿ ಸಾರ್ವಜನಿಕರು ಬರಬಹುದು. ಆಗಸ್ಟ್ 5ರಂದು ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ. ವಿದೇಶದಿಂದ ನಮ್ಮ ವಾತಾವರಣಕ್ಕೆ ಹೊಂದಿಕೊಳ್ಳುವ ಗಿಡಗಳ ಪಟ್ಟಿ ತರಿಸುತ್ತೇವೆ. ಅದರಲ್ಲಿ ಆಯ್ಕೆ ಮಾಡುತ್ತೇವೆ. ಪುನೀತ್ ರಾಜ್ ಕುಮಾರ್ ಕನ್ನಡದ ಪ್ರತಿಭೆ. ಚಿಕ್ಕ ವಯಸ್ಸಿನಲ್ಲಿ ನಮ್ಮನ್ನ ಅಗಲಿದ್ದಾರೆ. ಬಾಲ ಪ್ರತಿಭೆ, ಹಾಗಾಗಿ ಅವರನ್ನ ಸ್ಮರಿಸೋ ಕೆಲಸ ಮಾಡ್ತೀವಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!