ಬೆಂಗಳೂರು; ಇಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್ ಅನ್ನ ಮಂಡನೆ ಮಾಡಿದ್ದಾರೆ. ಈ ಬಜೆಟ್ ನೋಡಿ ಬಿಜೆಪಿ ಟೀಕೆ ಮಾಡಿದ್ದು, ಇದೊಂದು ಸಾಬರ ಬಜೆಟ್, ಹಲಾಲ್ ಬಜೆಟ್, ರಂಜಾನ್ ವೇಳೆ ಒಳ್ಳೆ ಗಿಫ್ಟ್ ನೀಡಿದ್ದಾರೆಂದೆಲ್ಲ ಟೀಕೆ ಮಾಡಿದ್ದಾರೆ. ವಿರೋಧ ಪಕ್ಷಗಳ ಟೀಕೆಗೆ ಸಿಎಂ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ.
ಬಜೆಟ್ ಮುಗಿದ ಬಳಿಕ ಮಾತನಾಡಿದ ಸಿಎಂ, ರಾಜ್ಯದ ಅಲ್ಪಸಂಖ್ಯಾತರಿಗೂ ಹಣ ಜಾಸ್ತಿ ಮಾಡಿದ್ದೇವೆ. ಅಲ್ಪಸಂಖ್ಯಾತರು ಅಂದ್ರೆ ಬರೀ ಮುಸ್ಲಿಂರು ಮಾತ್ರವಲ್ಲ, ಕ್ರಿಶ್ಚಿಯನ್ ಅಭಿವೃದ್ಧಿಗೂ ಹಣ ಮೀಸಲಿಟ್ಟಿದ್ದೇವೆ. ಆದರೆ ಬಿಜೆಪಿಯವರು ಹಲಾಲ್ ಬಜೆಟ್ ಎಂದು ಕರೆದಿದ್ದಾರೆ. ಬಿಜೆಪಿಯವರ ಮನಸ್ಸಿನ ಕೊಳಕು ಹೊರಗೆ ಬರುತ್ತಿದೆ. ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡೋದು ಬೇಡ್ವಾ..? ಅಲ್ಪಸಂಖ್ಯಾತರಿಗೆ ಶಿಕ್ಷಣ ಸರಿಯಾಗಿಲ್ಲ. ಅವರ ಶೈಕ್ಷಣಿಕ ಪ್ರಮಾಣ ಕಡಿಮೆ. ನಾವೂ ಸಮಾನತೆಯಲ್ಲಿ ನಂಬಿಕೆ ಇಟ್ಟುಕೊಂಡವರು. ಅದಕ್ಕೆ ಆ ರೀತಿ ಮಾಡಿದ್ದೇವೆ.
ಅವರು ಜಾತ್ಯಾತೀತತೆಯ ವಿರುದ್ಧವೇ ಇದ್ದಾರೆ. ಸಂವಿಧಾನ ಹೇಳೊದಂತೆ ನಾವೂ ನಡೆದುಕೊಂಡಿದ್ದೇವೆ. ಬಿಜೆಪಿಯವರಿಗೆ ಅಸೆಂಬ್ಲಿಯಲ್ಲಿಯೇ ಉತ್ತರ ಕೊಡುತ್ತೇವೆ. ಬಿಜೆಪಿಯವರು ಸಂವಿಧಾನಕ್ಕೆ ವಿರುದ್ಧವಾಗಿದ್ದಾರೆ. ಬಜೆಟ್ ದೂರದೃಷ್ಟಿ, ಸಮಾನತೆ ಆರ್ಥಿಕ ಸಾಮಾಜಿಕ ಬೆಳವಣಿಗೆ ಇರುವ ಬಜೆಟ್ ಬಜೆಟ್ ಇದಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಮಾತನಾಡಿ, ನಮಗೆ ಎಲ್ಲಾ ವರ್ಗಕ್ಕೂ ನ್ಯಾಯ ಸಿಗಬೇಕು. ಅಲ್ಪಸಂಖ್ಯಾತರು ಪಂಚರ್ ಹಾಕೋರು ಅಂತ ತೇಜಸ್ವಿ ಸೂರ್ಯ ಹೇಳಿದ್ದಾರೆ. ಅವರು ಪಂಕ್ಚರ್ ಹಾಕೋದು ಬೇಡ. ಈ ರೀತಿ ಬಿಡ್ಲಿಂಗ್ ಕಟ್ಟಬೇಕು ಎಂಬುದು ನಮ್ಮ ಇಚ್ಚೆ ಎಂದಿದ್ದಾರೆ.
ಬೆಂಗಳೂರು; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಫ್ಯಾಮಿಲಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸುತ್ತಲೆ ಇರುತ್ತಾರೆ. ಇದೀಗ…
ಬೆಂಗಳೂರು, ಮಾ. 14: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ…
ಭಗವದ್ಗೀತೆಯಿಂದ ಕಲಿಯಬೇಕಾದ ವಿಷಯಗಳು ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ಸನ್ನು ಬಯಸುತ್ತಾನೆ. ಅದಕ್ಕಾಗಿ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದಾನೆ ಮತ್ತು ಶ್ರಮಿಸುತ್ತಾನೆ.…
ಈ ರಾಶಿಯವರಿಗೆ ಹಣಕಾಸಿನ ತೀವ್ರ ಅಡಚಣೆ, ಈ ರಾಶಿಯವರಿಗೆ ಕೆಲಸದಲ್ಲಿ ಅಭದ್ರತೆ, ಸಂಗಾತಿಯಿಂದ ಮೋಸ ಸಂಭವ, ಶುಕ್ರವಾರದ ರಾಶಿ ಭವಿಷ್ಯ…
ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…