ಬಿಜೆಪಿ ವಿರುದ್ದ ಕಿಡಿಕಾರಿದಾ ಸಿದ್ದರಾಮಯ್ಯ

suddionenews
2 Min Read

ಹುಬ್ಬಳ್ಳಿ: ಅಲ್ಪಸಂಖ್ಯಾತರಿಗೆ ಬಿಜೆಪಿ ಟಿಕೆಟ್ ಬೇಕಾದರೆ ತಮ್ಮ ಕಚೇರಿ ಕಸ ಗುಡಿಸಬೇಕು ಎಂದು ಈಶ್ವರಪ್ಪ ಹೇಳುತ್ತಾರೆ. ಬಿಜೆಪಿಯವರು ಪ್ರಜಾಪ್ರಭುತ್ವ, ಬ್ರಾತ್ರುತ್ವ, ಸಮಾನತೆ, ಸೌಹಾರ್ದತೆ, ಸರ್ವಧರ್ಮ ಸಹಿಷ್ಣುತೆ ಸಾರುವ ಸಂವಿಧಾನ ಬದಲಾವಣೆ ಮಾಡುತ್ತೀವಿ ಎನ್ನುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಗೂರು ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿದ್ದವರು ಉದಾಸಿ, ಉಪಾಧ್ಯಕ್ಷರಾಗಿದ್ದವರು ಶಿವರಾಜ್ ಸಜ್ಜನರ್. ಈ ಇಬ್ಬರೂ ಸೇರಿ ಕಾರ್ಖಾನೆಯನ್ನು ಸಂಪೂರ್ಣ ಹಾಳು ಮಾಡಿದರು. ಇದಕ್ಕೆ ನಾವೇನು ಮಾಡಬೇಕು? ಇವತ್ತು ಕಾರ್ಖಾನೆಯನ್ನು ಬೋಗ್ಯಕ್ಕೆ ಕೊಟ್ಟಿರೋದು ಸುಳ್ಳಾ? ಉದಾಸಿ ಅಧ್ಯಕ್ಷರಾಗುವ ಮೊದಲು ಕಾರ್ಖಾನೆ ಲಾಭದಲ್ಲಿ ಇದ್ದಿದ್ದು ಸುಳ್ಳಾ? ಈ ಬಗ್ಗೆ ಮಾತಾಡಿ ಎಂದು ಜನರೇ ಒತ್ತಾಯ ಮಾಡುತ್ತಿದ್ದಾರೆ. ಹಾಗಾಗಿ ಸತ್ಯ ವಿಚಾರವನ್ನು ನಿನ್ನೆ ಹೇಳಿದ್ದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಡಿಸೇಲ್ ಬೆಲೆ 45 ರೂಪಾಯಿ ಇತ್ತು, ಈಗ 100 ರೂಪಾಯಿ ಆಗಿದೆ. ಇದಕ್ಕೆ ಕೇಂದ್ರ ಸರ್ಕಾರದ ತೆರಿಗೆ ಹೆಚ್ಚಳ ಕಾರಣ. ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ 3 ರೂಪಾಯಿ 45 ಪೈಸೆ ಇದ್ದ ಅಬಕಾರಿ ಸುಂಕವನ್ನು ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ 31 ರೂಪಾಯಿ 84 ಪೈಸೆಗೆ ಹೆಚ್ಚಿಸಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 125 ಡಾಲರ್ ಗೆ ತಲುಪಿದಾಗಲೂ ಡೀಸೆಲ್ ಬೆಲೆ 50 ರೂಪಾಯಿಯ ಆಸುಪಾಸಿನಲ್ಲೇ ಇತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಯನ್ನು ಕಡಿಮೆ ಮಾಡಲಿ. ಪೆಟ್ರೋಲ್ ಮೇಲೆ ತೆರಿಗೆ ಹಾಕೋದು ರಾಜ್ಯಗಳ ಹಕ್ಕು, ಪೆಟ್ರೋಲ್ ಡೀಸೆಲ್ ಜಿಎಸ್‌ಟಿಗೆ ಸೇರಿಸಿದರೆ ರಾಜ್ಯಗಳಿಗೆ ತೆರಿಗೆ ವಿಧಿಸುವ ಹಕ್ಕು ಹೋಗುತ್ತದೆ. ಹಾಗಾಗಿ ಇದಕ್ಕೆ ನನ್ನ ವಿರೋಧವಿದೆ.

ಹಿಂದೆ ಜಿ.ಎಸ್.ಟಿ ಕೌನ್ಸಿಲ್ ಸಭೆಗೆ ಯಡಿಯೂರಪ್ಪ ಅವರ ಪರವಾಗಿ ಹೋಗುತ್ತಿದ್ದದ್ದು ಬಸವರಾಜ ಬೊಮ್ಮಾಯಿ ಅವರೆ. ರಾಜ್ಯದ ಆರ್ಥಿಕ ಸ್ಥಿತಿಗತಿ ಏನಿದೆ ಅಂತ ಮುಖ್ಯಮಂತ್ರಿ ಆದವರಿಗೆ ಗೊತ್ತಿರಲ್ವಾ? ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಈ ರೀತಿ ಸುಳ್ಳು ಹೇಳುತ್ತಿದ್ದಾರೆ ಅಷ್ಟೆ.

ವರ್ಕಿಂಗ್ ಕಮಿಟಿಯ ಹಲವಾರು ಮಂದಿ ಸದಸ್ಯರು ನೀವೇ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ರಾಹುಲ್ ಗಾಂಧಿಯವರ ಬಳಿ ಒತ್ತಾಯ ಮಾಡಿದ್ದಾರೆ, ಹಾಗಾಗಿ ನಿಮ್ಮೆಲ್ಲರ ಮನವಿಯ ಬಗ್ಗೆ ಯೋಚನೆ ಮಾಡ್ತೀನಿ ಎಂದು ರಾಹುಲ್ ಗಾಂಧಿಯವರು ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂಬುದು ನನ್ನ ಅಭಿಪ್ರಾಯ. ಈ ಹಿಂದೆಯೂ ಹಲವು ಬಾರಿ ಇದನ್ನೇ ಹೇಳಿದ್ದೆ ಎಂದರು

Share This Article
Leave a Comment

Leave a Reply

Your email address will not be published. Required fields are marked *