Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಸರ್ಕಾರದಿಂದ ‘ಕೂಸಿನ ಮನೆ’ : ಗ್ರಾಮೀಣ ಭಾಗದ ಜನರಿಗೆ ಹೇಗೆ ಉಪಯೋಗ..?

---Advertisement---

 

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಅದರಲ್ಲೂ ಯಾವುದೇ ಯೋಜನೆಗಳನ್ನು ಜಾರಿಗೆ ತಂದರೂ ಸಹ ಅದರಲ್ಲಿ ಬಡವರ ಪರವಾಗಿಯೇ ಇರಲಿದೆ. ಐದು ಗ್ಯಾರಂಟಿಗಳು ಕೂಡ ಅದೇ ದಿಕ್ಕಿನಲ್ಲಿ ಸಾಗುತ್ತಿವೆ. ಇದೀಗ ಮತ್ತೊಂದು ಯೋಜನೆಯನ್ನು ಜಾರಿಗೆ ತರಲು ಹೊರಟಿದ್ದಾರೆ.

ಗ್ರಾಮೀಣ ಭಾಗದ ಜನರಿಗಾಗಿ ಕೂಸಿನ ಮನೆಯನ್ನು ಲೋಕಾರ್ಪಣೆ ಮಾಡಲು ಹೊರಟಿರುವ ಬಗ್ಗೆ ಕಾಂಗ್ರೆಸ್ ತನ್ನ ಅಕೌಂಟ್ ನಲ್ಲಿ ತಿಳಿಸಿದೆ. ಇದು ಶಿಶುಪಾಲನ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶವಾಗಿದೆ.

ಗ್ರಾಮೀಣ ಭಾಗದ ಜನತೆಗೆ ಮತ್ತೊಂದು ವಿಶಿಷ್ಠ ಯೋಜನೆ ರೂಪಿಸಿದೆ ನಮ್ಮ ಸರ್ಕಾರ. ನರೇಗಾ ಕೂಲಿ ಕಾರ್ಮಿಕರು, ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಭಿ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ನೆರವಾಗಲು ಸಚಿವ @PriyankKharge ಅವರ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ 4000 ಗ್ರಾಮ ಪಂಚಾಯತಿಗಳಲ್ಲಿ “ಕೂಸಿನ ಮನೆ” ಶಿಶುಪಾಲನಾ ಕೇಂದ್ರಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ.

ಗ್ರಾಮೀಣ ಜನರ ಬದುಕನ್ನು ಹಸನಾಗಿಸುವ ಗುರಿಯನ್ನು ನಮ್ಮ ಸರ್ಕಾರ ತಲುಪುವುದು ನಿಶ್ಚಿತ ಎಂದು  ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ಅದೆಷ್ಟೋ ಕೂಲಿ ಕಾರ್ಮಿಕರ ಮಕ್ಕಳಿಗೆ ಈ ಶಿಶುಪಾಲನ ಕೇಂದ್ರದಿಂದ ಸಹಾಯವಾಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...