ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಕೇಳಿ ಬಂದಿದೆ. ಸಿದ್ದರಾಮಯ್ಯ ಸರ್ಕಾರದ ಸಚಿವ ಎಂ.ಬಿ.ಪಾಟೀಲ್ ಅವರೇ ಈ ಬಗ್ಗೆ ಇಂದು ಮಾತನಾಡಿದ್ದಾರೆ. ಈ ಸಂಬಂಧ ಬಿವೈ ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಧರ್ಮವನ್ನು ಒಡೆಯುವ ದುಸ್ಸಾಹಕ್ಕೆ ಕೈ ಹಾಕಿದ್ದಾರೆ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.
ಈ ಹಿಂದೆ ಕೂಡ ಷಡ್ಯಂತ್ರಕ್ಕೆ ಯಶಸ್ಸು ಸಿಕ್ಕಿಲ್ಲ. ಮುಂದೆಯೂ ಸಿಗುವುದಿಲ್ಲ. ಧರ್ಮವನ್ನು ಒಡೆಯುವ ದುಸ್ಸಾಹಸಕ್ಕೆ ಸಿದ್ದರಾಮಯ್ಯ ಅವರು ಕೈ ಹಾಕಿದ್ದಾರೆ. ಇಂದು ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಮುನ್ನಲೆಗೆ ಬಂದಿದ್ದನ್ನ ನಾನು ಮಾಧ್ಯಮದಲ್ಲಿ ನೋಡಿದೆ. ಪ್ರತ್ಯೇಕ ಧರ್ಮ ಬೇಕು ಅಂತ ಎಲ್ಲೋ ಕೂತು ಅವರು ಹೇಳ್ತಿದ್ದಾರೆ ಅಂದ್ರೆ ಅದರ ಹಿನ್ನೆಲೆ ಏನು ಅಂತ ಜನರಿಗೆ ಅರ್ಥವಾಗುತ್ತದೆ. ಇವತ್ತು ಹಿಂದೂ ಧರ್ಮವನ್ನು ಕೂಡ ರಕ್ಷಣೆ ಮಾಡಿಕೊಳ್ಳಬೇಕಾಗಿದೆ. ಹಿಂದೂ ಧರ್ಮವನ್ನ ಒಡೆಯುವ ಕೆಲಸಕ್ಕೆ ಕೈ ಹಾಕಿರುವುದರ ಕಡೆಗೆ ಗಮನವನ್ನು ಕೊಡಬೇಕಾಗುತ್ತದೆ.
ಸಮಾಜವನ್ನು ಉಳಿಸುವ ಕೆಲಸವೂ ಆಗಬೇಕಿದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟ ಜಾತಿ, ಪಂಗಡದವರಿಗೂ ಕೂಡ ನ್ಯಾಯ ಕೊಡುವಂತಹ ಕೆಲಸ ಆಗಬೇಕಿದೆ. ಆದರೆ ಅದನ್ನು ಬಿಟ್ಟು ಪ್ರತ್ಯೇಕ ಧರ್ಮದ ಕೂಗು ಕೇಳಿಸುತ್ತಿದೆ. ಸಿದ್ದರಾಮಯ್ಯ ಅವರಿಗೆ ಯಾಕಿಷ್ಟೂ ಆತುರ. ಧರ್ಮವನ್ನು ಒಡೆಯುವ ದುಸ್ಸಾಹಕ್ಕೆ ಕೈ ಹಾಕಿದ್ದಾರೆ ಎಂದು ಬಿವೈ ವಿಜಯೇಂದ್ರ ಅವರು ಆಕ್ರೋಶ ಹೊರ ಹಾಕಿದ್ದಾರೆ. ಸಚಿವ ಎಂಬಿ ಪಾಟೀಲ್ ಅವರು ಇಂದು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡಿದ್ದರು.

