Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರನ್ನ ಮೈಸೂರು ಹುಲಿ ಅಂತಾರೆ.. ಈಗ ಮಾತು ಉಳಿಸಿಕೊಳ್ಳಲಿ : ವರ್ತೂರು ಪ್ರಕಾಶ್

Facebook
Twitter
Telegram
WhatsApp

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಲ್ಲುತ್ತಾರೆ ಎಂಬ ಗೊಂದಲವಿತ್ತು. ಆ ಗೊಂದಲಕ್ಕೆ ಸಿದ್ದರಾಮಯ್ಯ ಅವರೇ ತೆರೆ ಎಳೆದಿದ್ದರು. ಕೋಲಾರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಆದರೆ ಕೆಲವೊಬ್ಬರು ನೇರವಾಗಿಯೇ ಸಲಹೆಯನ್ನು ನೀಡಿದ್ದರು. ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಹಲವರು ಕೋಲಾರ ಸೇಫ್ ಅಲ್ಲ ಎಂದೇ ಹೇಳಿದ್ದರು. ಆದರೂ ಸಿದ್ದರಾಮಯ್ಯ ಕೇಳಿರಲಿಲ್ಲ. ಈಗ ಹೈಕಮಾಂಡ್ ಕೂಡ ಕೋಲಾರ ಬೇಡ ಎಂದೇ ಹೇಳುತ್ತಿದೆ.

ಈ ಬಗ್ಗೆ ವರ್ತೂರ್ ಪ್ರಕಾಶ್ ಪ್ರತಿಕ್ರಿಯೆ ನೀಡಿದ್ದು ಸವಾಲು ಹಾಕಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ವರ್ತೂರ್ ಪ್ರಕಾಶ್, ನಾನು ಒಂದೂವರೆ ತಿಂಗಳ ಹಿಂದೆಯೇ ಹೇಳಿದ್ದೆ. ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ಲಲ್ಲ ಎಂದು. ಕೋಲಾರದಲ್ಲಿ ಅವರು ನಿಂತರೆ ಸ್ಪರ್ಧೆ ಕಷ್ಟ ಎಂದೇ ಹೇಳಿದ್ದೆ. ಈಗ ಅವರದ್ದೇ ಪಕ್ಷದವರು ಅದನ್ನು ಒಪ್ಪಿಕೊಂಡಿದ್ದಾರೆ. ನಾನು ಈಗಲೂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸುತ್ತೇನೆ. ಅವರು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿ.

ಸಿದ್ದರಾಮಯ್ಯ ಅವರನ್ನು ಮೈಸೂರು ಹುಲಿ ಅಂತಾರೆ. ಈಗ ಆಡಿದ ಮಾತನ್ನು ಉಳಿಸಿಕೊಳ್ಳಲಿಲ್ಲ ಅಂದ್ರೆ ಏನಾಗುತ್ತೆ..? ಅವರು ಕೋಲಾರಕ್ಕೆ ಬರಬೇಕು, ಕೋಲಾರದಿಂದಾನೇ ನಿಲ್ಲಬೇಕು. ಈಗ ಅವರೇನಾದರೂ ಕ್ಷೇತ್ರ ಬಿಟ್ಟು ಹೋದರೆ ನನಗೆ ಹೆದರಿಕೊಂಡು ಹೋದರೂ ಎಂದು ಮಾತನಾಡಿಕೊಳ್ಳುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

error: Content is protected !!