ಸಿದ್ದರಾಮಯ್ಯ ವಿಪಕ್ಷ ನಾಯಕರೆಂಬುದನ್ನ ಮರೆತು ಮಾತಾಡುತ್ತಿದ್ದಾರೆ : ಬಿಎಸ್ವೈ ಗರಂ..!

ದಾವಣಗೆರೆ: ಪರಿಷತ್ ಚುನಾವಣೆ ಹತ್ತಿರವಿದ್ದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಹ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಅನಗೋಡು ಗ್ರಾಮದಲ್ಲಿ ಪ್ರಚಾರದಲ್ಲಿ ತೊಡಗಿದ ಯಡಿಯೂರಪ್ಪ, ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಎಂಬುದನ್ನಜ ಮರೆತು ಮಾತಾಡುತ್ತಿದ್ದಾರೆ. ಆದ್ರೆ ಚುನಾವಣೆಯ ಫಲಿತಾಂಶದ ಬಳಿಕ ಆ ಬಗ್ಗೆ ತಿಳಿಯುತ್ತದೆ. ಬಹಳ ಹಗುರವಾಗಿ ಮಾತಾಡುವ ಅವರ ಸೊಕ್ಕಿನ ಮಾತುಗಳಿಗೆ ಯಾರು ಬೆಲೆ ಕೊಡುವುದಿಲ್ಲ. ಆ ಧಿಮಾಕು ಬಿಡಬೇಕು ಎಂದಿದ್ದಾರೆ.

ಮತದಾರರು ಕೂಡ ಈಗ ಜಾಗೃತರಾಗಿದ್ದಾರೆ. ಅವರಿಗೆ ಸರಿ ಯಾವುದು, ತಪ್ಪು ಯಾವುದು ಎಂಬುದು ಬಹಳ ಬೇಗ ತಿಳಿಯುತ್ತದೆ. ಸೋತರು ಬುದ್ದಿ ಕಲಿತಿಲ್ಲ ಸಿದ್ದರಾಮಯ್ಯ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಅವರಿನ್ನು ಜಾಗೃತರಾಗಿಲ್ಲ ಎಂದು ಕಿಡಿಕಾರಿದ್ರು.

ಇದೇ ವೇಳೆ ಪ್ರಧಾನ ಮಂತ್ರಿ ಮೋದಿ ಅವರನ್ನ ದೇವೇಗೌಡ ಅವರು ಭೇಟಿಯಾಗಿದ್ದರಿ. ಇದು ರಾಜಕೀಯ ಭೇಟಿ ಅಂತ ಸಿದ್ದರಾಮಯ್ಯ ಅವರು ಅಣಕಿಸಿದ್ದರು. ಇದಕ್ಕೂ ಉತ್ತರ ನೀಡಿರುವ ಯಡಿಯೂರಪ್ಪ, ಪ್ರಧಾನಿ ಮೋದಿ ಅವರನ್ನ ದೇವೇಗೌಡ ಅವರು ಭೇಟಿ ಮಾಡಿರುವುದು ಚುನಾವಣೆಯ ವಿಚಾರಕ್ಕಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago