Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರಿಗೆ ನಾನು ಯಾರಂತ ಗೊತ್ತಿಲ್ಲದೆ ಇರಬಹುದು : ಶಾಸಕ ರಘುಪತಿ ಭಟ್ ಅಸಮಾಧಾನ

Facebook
Twitter
Telegram
WhatsApp

ಉಡುಪಿ: ಹಿಜಾಬ್ ವಿಚಾರವಾಗಿ ಶಾಸಕ ರಘುಪತಿ ಭಟ್ ನೀಡಿದ್ದ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು. ಯಾರು ಆ ರಘುಪತಿ ಭಟ್ ಎಂದು ಕೇಳಿದ್ದರು. ಆ ವಿಚಾರವಾಗಿ ಇದೀಗ ಗರಂ ಆಗಿರುವ ಶಾಸಕ ರಘುಪತಿ ಭಟ್, ಸಿದ್ದರಾಮಯ್ಯ ಅವರಿಗೆ ಖಾರವಾಗಿಯೇ ಉತ್ತರ ಕೊಟ್ಟಿದ್ದಾರೆ.

ನಾನು ಕೂಡ ಅವರದ್ದೇ ದಾಟಿಯಲ್ಲಿ ಮಾತನಾಡಬಹುದು. ಏಕವಚನದಲ್ಲಿ ಮಾತನಾಡಿದ್ದಕ್ಕೆ ಸಿಂಪತಿ ಇದೆ. ನಾನು ಕೂಡ ಅದೇ ದಾಟಿಯಲ್ಲಿ ಮಾತನಾಡಿದ್ರೆ ಶೋಭೆ ತರಲ್ಲ. ರಘುಪತಿ ಭಟ್ ಯಾರು ಅನ್ನೋದನ್ನ ಉಡುಪಿ ಮತದಾರರನ್ನ ಕೇಳಲಿ. ಸಿದ್ದರಾಮಯ್ಯ ಅವರಿಗೆ ನಾನು ಯಾರು ಅಂತ ಗೊತ್ತಿಲ್ಲದೇ ಇರಬಹುದು. ಅವರ ಅಭ್ಯರ್ಥಿ ಎದುರೇ ಮೂರು ಬಾರಿ ಗೆದ್ದಿದ್ದೇನೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಸಮವಸ್ತ್ರ ಸಂಹಿತೆ ಇತ್ತು. ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಯಲ್ಲೂ ಸಮವಸ್ತ್ರ ಧರಿಸುತ್ತಿದ್ದರು. ಹಿಜಾಬ್ ಧರಿಸದೇನೆ ತರಗತಿಗಳಿಗೆ ಹಾಜರಾಗುತ್ತಿದ್ದರು. ಸಿದ್ದರಾಮಯ್ಯ ಅವರ ಕಾಲದಲ್ಲಿದ್ದ ಪದ್ಧತಿಯನ್ನ ಮುಂದುವರೆಸಲು ಕ್ರಮ ತೆಗೆದುಕೊಂಡಿದ್ದೇವೆ. ಇದನ್ನ ಅವರು ಅರಿಯಬೇಕು ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!