ಕೊಡಗು ನೆರೆ ವೀಕ್ಷಣೆಗೆ ತೆರಳಿದ್ದ ಸಿದ್ದರಾಮಯ್ಯ ಗೋ ಬ್ಯಾಕ್ ಬಿಸಿ..!

1 Min Read

ಕೊಡಗು: ಜಿಲ್ಲೆಯಾದ್ಯಂತ ಭಾರೀ ಮಳೆಗೆ ನೆರೆ ಹಾನಿಯಾಗಿದೆ. ಈ ಹಿನ್ನೆಲೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೊಡಗಿನ ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.

ಕೊಡಗಿನ ತಿತಿಮತಿಯಲ್ಲಿ ಸಿದ್ದರಾಮಯ್ಯ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ. ಸಿದ್ದರಾಮಯ್ಯ ಟಿಪ್ಪು ಶಿಷ್ಯ ಎಂದು ಘೋಷಣೆ ಕೂಗುತ್ತಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಯುತ್ತಿದೆ. ಪೊಲೀಸರು ಪ್ರತಿಭಟನಾಕಾರರನ್ನು ತಡೆಯುವ ಯತ್ನ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಕಾರು ಬರುತ್ತಿದ್ದಂತೆ ಪ್ರತಿಭಟನಾಕಾರರ ಕಿಚ್ಚು ಹೆಚ್ಚಾಗಿದೆ.

ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಇದೇ ವೇಳೆ ಪೊಲೀಸರ ನಡುವೆಯೂ ವಾಗ್ವಾದ ನಡೆದಿದೆ. ಸಿದ್ದರಾಮಯ್ಯ ನಮ್ಮ‌ ಜಿಲ್ಲೆಗೆ ಬರುವುದು ಬೇಡ, ನೆರೆ ಪರಿಸ್ಥಿತಿ ಅವಲೋಕಿಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಿಕ್ಕಾರ ಧಿಕ್ಕಾರ ಸಿದ್ದರಾಮಯ್ಯಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಧಿಕ್ಕಾರದ ಬಾವುಟಗಳನ್ನು ತೋರಿಸಿದ್ದಲ್ಲದೆ, ಸಿದ್ದರಾಮಯ್ಯ ಕಾರಿನ ಕಡೆಗೆ ಪೋಸ್ಟರ್ ಗಳನ್ನು ಎಸೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *