Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದೇನಿದು ಇದ್ದಕ್ಕಿದ್ದ ಹಾಗೇ ಬಿಜೆಪಿಗೆ ವೋಟ್ ಹಾಕಿ ಅಂತಿದ್ದಾರೆ ಸಿದ್ದರಾಮಯ್ಯ..!

Facebook
Twitter
Telegram
WhatsApp

ವಿಜಯಪುರ: ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ಯಾವಾಗಲೂ ದೂಷಿಸುತ್ತಿರುತ್ತಾರೆ. ಜೆಡಿಎಸ್ ಮತ್ತು ಬಿಜೆಪಿ ಮೇಲೆ ಹರಿಹಾಯುತ್ತಿರುತ್ತಾರೆ. ಬಿಜೆಪಿ ಸರ್ಕಾರ ಮಾಡುವ ತಪ್ಪುಗಳನ್ನು ಜನರ ಮುಂದೆ ಇಡುತ್ತಾರೆ. ಹೀಗೆ ಯಾವಾಗಲೂ ಬಿಜೆಪಿ ಜಪ ಮಾಡುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜನರ ಬಳಿ ಬಿಜೆಪಿಗೆ ವೋಟ್ ಹಾಕಿ ಎಂದಿದ್ದಾರೆ.

ನಿನ್ನೆ ವಿಜಯಪುರದಲ್ಲಿ ಪ್ರಜಾಧ್ವನಿ ಯಾತ್ರೆ ನಡೆದಿದೆ. ಇಂಡಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬರುತ್ತಿದ್ದಂತೆ ಊರಿನ ಜನರೆಲ್ಲಾ ಅದ್ದೂರಿ ಸ್ವಾಗತ ಮಾಡಿದರು. ಈ ವೇಳೆ ಜನರನ್ನುದ್ದೇಶಿಸಿ ಭಾಷಣ ಮಾಡುವಾಗ ಸಿದ್ದರಾಮಯ್ಯ, ಬಿಜೆಪಿಗೆ ಮತ ಹಾಕಿ ಎಂದಿದ್ದಾರೆ. ಈ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಂದು ವಿಜಯಪುರ ಜಿಲ್ಲೆಯೊಂದರಲ್ಲಿಯೇ 1300 ಕೋಟಿ ಸಾಲ ಮನ್ನಾ ಆಗಿತ್ತು. ಬಿಜೆಪಿಯವರು ಒಂದು ರೂಪಾಯಿಯನ್ನು ಮನ್ನಾ ಮಾಡಲಿಲ್ಲ. ನಮ್ಮ ಸರ್ಕಾರ ಇದ್ದಾಗ ಫ್ರೀಯಾಗಿ 7 ಕೆಜಿ ಅಕ್ಕಿ ನೀಡುತ್ತಿದ್ದೆವು. ಇದೀಗ ಅದನ್ನು 5 ಕೆಜಿಗೆ ಇಳಿಸಿದ್ದಾರೆ. ಆಗ ಯಡಿಯೂರಪ್ಪ ಅವರಿಗೆ ಹೇಳಿದ್ದೆ ಹಸಿವು ಮುಕ್ತ ಕರ್ನಾಟಕ ಮಾಡಬೇಕು ಅಂತ. ಆಗ ಅವರು ಅದಕ್ಕೆ ಏನು ಮಾಡಲಿ..? ನಮ್ಮ ಸರ್ಕಾರದಲ್ಲಿ ದುಡ್ಡಿಲ್ಲ ಅಂದಿದ್ರು. ಆಗ ನಾನು ನೀವೂ ಲೂಟಿ ಮಾಡೋದನ್ನ ಕಮ್ಮಿ ಮಾಡಿ ಎಂದಿದ್ದೆ. ಈಗ ನಾನು ಮತ್ತೆ ಹೇಳುತ್ತೇನೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿಯನ್ನು ಫ್ರಿಯಾಗಿ ನೀಡುತ್ತೇವೆ. ನಮ್ಮ ಮೇಲೆ ನಂಬಿಕೆ ಇದೆ ಅಲ್ವಾ..? ನಮ್ಮ ಮೇಲೆ ವಿಶ್ವಾಸ ಇದೆ ಅಲ್ವಾ..? ಹಾಗಾದ್ರೆ ನೀವೆಲ್ಲಾ ಬಿಜೆಪಿಗೆ ವೋಟ್ ಹಾಕಿ ಎಂದು ಯಡವಟ್ಟು ಮಾಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!