Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ 5 ವರ್ಷ ಮುಂದುವರಿಯಬೇಕು : ಅಹಿಂದ ಮುಖಂಡರ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 29 : ‘ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 5 ವರ್ಷ ಮುಂದುವರಿಯಬೇಕು’ ಯಾವುದೇ ಕಾರಣಕ್ಕೂ ಸಹಾ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಬಾರದು ಎಂದು ಪಕ್ಷದ ಹೈಕಮಾಂಡಿಗೆ ಅಹಿಂದ ಚಳುವಳಿಯ ಮಖಂಡರು ಆಗ್ರಹಿಸಿದ್ದಾರೆ.

ಈ ಬಗ್ಗೆ ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಹಿಂದ ಚಳುವಳಿಯ ಚಿತ್ರದುರ್ಗದ ಅಹಿಂದ ಚಳುವಳಿಯ ಮುಖ್ಯ ಸಂಚಾಲಕ ಸುರೇಶ್ ಬಾಬು ಸಾಮಾಜಿಕ ನ್ಯಾಯದ ಹರಿಕಾರರಾಗಿರುವ ಸಿದ್ದರಾಮಯ್ಯ ಅವರನ್ನು ಅರ್ಧದಲ್ಲೇ ಸಿ.ಎಂಹುದ್ದೆಯಿಂದ ಇಳಿಸಬಾರದು. ಕಳೆದ ಅವಧಿಯಲ್ಲಿ ಅವರು ಬಹಳ ಮುನ್ನೋಟದಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿದ್ದರು. ಆದರೆ ಅದನ್ನು ನಿಷ್ಕ್ರಿಯಗೊಳಿ ಸಲಾಯಿತು. ಈಗ ಮತ್ತೊಮ್ಮೆ ಸಮೀಕ್ಷೆ ನಡೆಸಲಾಗಿದ್ದು ಅದನ್ನು ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಅವರೇ ಸಿ.ಎಂ ಆಗಿ ಮುಂದುವರಿಯಬೇಕು’ ಎಂದು ಒತ್ತಾಯಿಸಿದರು.

‘ಸಮಾಜದ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಹಂಚಿಕೆಯಾಗಬೇಕಾದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಜನಾದೇಶ ಕೂಡ ಅವರ ಪರವಾಗಿಯೇ ಇದೆ. ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿಮ ಸಿದ್ದರಾಮಯ್ಯ ಎಂದು ಹೇಳುವುದರ ಮೂಲಕ ಮತವನ್ನು ಪಡೆಯಲಾಯಿತು, ಈ ಅರ್ಧದಲ್ಲಿ ಅಧಿಕಾರದಿಂದ ಕೆಳಗೆ ಇಳಿಸುವ ಪ್ರಯತ್ನ ಸರಿಯಲ್ಲ ಅವರು ಐದು ವರ್ಷ ಪೂರ್ಣ ಮಾಡಬೇಕು ಇದಕ್ಕೆ ಪಕ್ಷದ ಹೈಕಮಾಂಡ್ ಅನುಮತಿಯನ್ನು ನೀಡಬೇಕಿದೆ ಯಾರ ಒತ್ತಡಕ್ಕೂ ಮಣಿಯದೆ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸಬೇಕಿದೆ ಎಂದು ಆಗ್ರಹಿಸಿ ಅಗತ್ಯ ಬಿದ್ದರೆ ದೆಹಲಿಗೆ ನಿಯೋಗವನ್ನು ತೆಗೆದುಕೊಂಡು ಹೋಗಿ ಪಕ್ಷದ ಹೈಕಮಾಂಡಿಗೆ ಮನವಿ ಮಾಡಲಾಗುವುದೆಂದು ತಿಳಿಸಿದರು.

ಅಲೆಮಾರಿ ಸಮುದಾಯದ ಅಧ್ಯಕ್ಷ ಲಕ್ಷ್ಮೀಕಾಂತ ಮಾತನಾಡಿ ಸಿದ್ದರಾಮಯ್ಯರವರು ಹಿಂದಿನ ಬಾರಿ ಐದು ವರ್ಷ ಆಧಿಕಾರವನ್ನು ನಡೆಸಿದರು ಈ ಸಮಯದಲ್ಲಿ ಯಾವುದೇ ಕಪ್ಪು ಚುಕ್ಕೆ ಇರಲಿಲ್ಲ ಈ ಬಾರಿಯೂ ಸಹಾ ಕಳೆದ  ಎರಡುವರೆ ವರ್ಷದಿಂದ ರಾಜ್ಯದಲ್ಲಿ ಅಧಿಕಾರವನ್ನು ನಡೆಸುತ್ತಿದ್ದಾರೆ ಈಗಲೂ ಸಹಾ ಯಾವುದೇ ಕಪ್ಪು ಚುಕ್ಕೆ ಇಲ್ಲ ಈ ಸಮಯದಲ್ಲಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವುದು ಸರಿಯಲ್ಲ ವರನ್ನು ಈ ಅವಧಿ ಮುಗಿಯುವವರೆಗೂ ಮುಂದುವರೆಸಬೇಕಿದೆ ರಾಜ್ಯದಲ್ಲಿ 25 ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಅದರಲ್ಲಿ ಹಿಂದುಳಿದ ವರ್ಗದ 5 ಜನ ಮಾತ್ರ ಸಿಎಂ ಆಗಿದ್ದಾರೆ. ಅದರಲ್ಲಿ ದಲಿತರು ಸಿಎಂ ಆಗಿಲ್ಲ. ಸಿದ್ದರಾಮಯ್ಯ ಮತ್ತು ಅರಸು ಅವರು ಮಾತ್ರ 5 ವರ್ಷ ಪೂರೈಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್ ಬುದ್ಧ ಬಸವ, ಕುವೆಂಪು, ಲೋಹಿಯಾ ಅವರ ವಿಚಾರಧಾರೆಗಳನ್ನು ಅನುಸರಿಸಿ ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಿ ಮುಖ್ಯಮಂತ್ರಿಯಾಗಿ ರಾಜ್ಯಭಾರ ಮಾಡುತ್ತಿದ್ದಾರೆ  ಅಂದು ಬಸವಣ್ಣ, ಇಂದು ಸಿದ್ದರಾಮಯ್ಯ ಅವರು ದಕ್ಷ ಹಾಗೂ ಸಮರ್ಥ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಷಫೀವುಲ್ಲಾ ಮಾತನಾಡಿ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಮಾದರಿ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಅವರು ಬಡವರ ನಾಯಕ,ಜಾತಿ ನಾಯಕ ಅಲ್ಲ.ಎಲ್ಲಾ ವರ್ಗಗಳ ನಾಯಕ.ಅಂದು ದೇವರಾಜು ಅರಸು, ಇಂದು ಸಿದ್ದರಾಮಯ್ಯ ಅವರು ರಾಷ್ಟ್ರ ಕಂಡ ಪ್ರಾಮಾಣಿಕ ನಾಯಕ. ಅಂಬೇಡ್ಕರ್ ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಅವರ ಪರವಾದ ಅಲೆ ಇದೆ ಎಂದರು.

ಗೋಷ್ಟಿಯಲ್ಲಿ ತಿಪ್ಪೇಸ್ವಾಮಿ, ನಾಗರಾಜ್, ಮದುಸೂಧನ್, ಪರ್ವಿನ್, ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...