Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಅವರು ವಿಮಾನದಲ್ಲಿ ಓಡಾಡೋದಕ್ಕೆ ಖರ್ಚು ಮಾಡಿದ್ದು 47 ಕೋಟಿ..!

---Advertisement---

ಬೆಂಗಳೂರು: ಅಧಿಕಾರದಲ್ಲಿ ಇರುವವರ ಓಡಾಟ ಜಾಸ್ತಿನೆ ಇರುತ್ತೆ. ಸಮಯವನ್ನ ಬ್ಯಾಲೆನ್ಸ್ ಮಾಡಬೇಕಾಗಿರುತ್ತೆ, ಸೇಫ್ಟಿಯನ್ನು ನೋಡಿಕೊಳ್ಳಬೇಕಾಗಿರುತ್ತದೆ. ಹೀಗಾಗಿ ವಿಮಾನದಲ್ಲಿನ ಓಡಾಟವೇ ಜಾಸ್ತಿ ಇರುತ್ತೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ವಿಮಾನದಲ್ಲಿ ಓಡಾಡಿದ ಖರ್ಚಿನ ಬಾಬ್ತು ಸುದ್ದಿಯಾಗ್ತಾ ಇದೆ. ಯಾಕಂದ್ರೆ ವಿಮಾನಕ್ಕಾಗಿ ಸಿದ್ದರಾಮಯ್ಯ ಅವರು ಖರ್ಚು ಮಾಡಿರುವುದು ಒಂದೆರಡು ಕೋಟಿಯಲ್ಲ. ಬರೋಬ್ಬರಿ 47 ಕೋಟಿ 38 ಲಕ್ಷದ 24 ಸಾವಿರದ 347 ರೂಪಾಯಿ.

2023ರಿಂದ ಅಂದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗಿನಿಂದ 2025ರ ನವೆಂಬರ್ ತಿಂಗಳವರೆಗಿನ ಸಿದ್ದರಾಮಯ್ಯ ಅವರ ವಿಮನಾಯಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದಲ್ಲಿ ಓಡಾಡಿದ ಖರ್ಚು ವೆಚ್ಚದ ಬಗ್ಗೆ ಮಾಹಿತಿ ಸಿಕ್ಕಿದೆ. ಇಂದು ಬೆಳಗಾವಿಯ ಅಧಿವೇಶನದಲ್ಲಿ ಪರಿಷತ್ ಸದಸ್ಯ ಎನ್ ರವಿಕುಮಾರ್ ಈ ಸಂಬಂದ ಪ್ರಶ್ನೆ ಮಾಡಿದ್ದಾರೆ. ಆಗ ಸರ್ಕಾರ ಉತ್ತರ ನೀಡಿದ್ದು, ಖರ್ಚಿನ ಬಗ್ಗೆ ಮಾಹಿತಿ ನೀಡಿದೆ.

ಸಿಎಂ ಸಿದ್ದರಾಮಯ್ಯ ಅವರ ವಿಮಾನಯಾನ ಹಾಗೂ ಹೆಲಿಕಾಪ್ಟರ್ ಪ್ರಯಾಣಕ್ಕೆ ಒಟ್ಟು 47 ಕೋಟಿ ರೂಪಾಯಿ ಹಣವನ್ನು ಬಳಕೆ ಮಾಡಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಹೋಗುವುದಕ್ಕೆ, ಸಿಎಂ ಹೆಲಿಕಾಪ್ಟರ್ ಬಳಕೆ ಮಾಡಿದ್ದಾರೆ. ಅಷ್ಟೇ ಅಲ್ಲ ವಿಶೇಷವಾಗಿ ಬಳಕೆ ಮಾಡಲಾಗಿದೆ. ದೆಹಲಿ, ಹೈದರಾಬಾದ್, ಚೆನ್ನೈ ಸೇರಿದಂತೆ ವಿವಿದೆಢರ ಸಿಎಂ ಸಿದ್ದರಾಮಯ್ಯ ಅವರು ಓಡಾಟ ನಡೆಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರು ಸರ್ಕಾರದ ಬೊಕ್ಕಸದಿಂದ 47 ಕೋಟಿ ರೂಪಾಯಿಯನ್ನು ಬಳಕೆ ಮಾಡಿದ್ದಾರೆ. ಇನ್ನು ಸರ್ಕಾರ ನೀಡಿದ ಮಾಹಿತಿಯಲ್ಲಿ ಬರೀ 5 ಕೋಟಿಗೂ ಹೆಚ್ಚು ಹಣವನ್ನು ಮೈಸೂರು ಪ್ರವಾಸಕ್ಕೆ ಸಿಎಂ ಬಳಕೆ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now