Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸ್ಲಿಮರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ : ಬಿಜೆಪಿ ನಾಯಕರು ಕೆಂಡಾಮಂಡಲ

Facebook
Twitter
Telegram
WhatsApp

ಬೆಳಗಾವಿ: ನೀವೂ ಕೂಡ ಭಾರತೀಯರು ಅಲ್ವಾ. ಈ ದೇಶ ನಿಮಗೂ ಸೇರಬೇಕು ಅಲ್ವಾ..? ನಿಮಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗುವುದಕ್ಕೆ ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮರ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದಾರೆ. ಆರ್ ಅಶೋಕ್, ಅಶ್ವತ್ಥ್ ನಾರಾಯಣ್, ಮಹೇಶ್ ಟೆಂಗಿನಕಾಯಿ ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾತನಾಡಿ, ಇದಕ್ಕಿಂತ ದರಿದ್ರ ಸರ್ಕಾರ ನಮ್ಮ ದೇಶದಲ್ಲಿ ಸಿಗುವುದಕ್ಕೆ ಚಾನ್ಸೇ ಇಲ್ಲ. ಇದಕ್ಕೆಲ್ಲಾ ಉತ್ತರ ಲೋಕಸಭಾ ಚುನಾವಣೆಯ ಬಳಿಕ ಉತ್ತರ ಸಿಗಲಿದೆ ಎಂದಿದ್ದಾರೆ.

ಮುಸ್ಲಿಮರಿಗೆ ಸಂಪತ್ತು ಕೊಡೋಕೆ ಸಿದ್ದರಾಮಯ್ಯ ಯಾರು‌? ಮುಸ್ಲಿಮರಿಗೆ ಪಾಕಿಸ್ತಾನ ನೀಡಲಾಗಿದೆ. ಇದೇನು ಅವರ ಅಪ್ಪನ ಆಸ್ತಿ ಅಲ್ಲ. ಹತ್ತು ಸಾವಿರ ಕೋಟಿ ಹಂಚಲು ಸಿದ್ದರಾಮಯ್ಯ ಅಪ್ಪನ ಆಸ್ತಿನಾ..? ಹಿಂದೂಗಳ ತೆರಿಗೆಯಿಂದ ದೇಶ ನಡೆಯುತ್ತಿದೆ. ಈ ದೇಶದ ಅನ್ನ ತಿಂದ ಋಣ ಏನಾದ್ರೂ ಇದೆಯಾ ಎಂದು ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಮಾತನಾಡಿದ್ದು ದೇಶದ ದೃಷ್ಟಿಯಿಂದ ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಈ ರೀತಿಯಾದಂತ ಹೇಳಿಕೆ ಕೊಟ್ಟು ಹಿಂದೂಗಳನ್ನು ಎರಡನೇ ದರ್ಜೆಯ ರೀತಿ ನೋಡುವಂತೆ ಮಾಡುತ್ತಿದ್ದಾರೆ. ಹಿಂದೆ ಟಿಪ್ಪು ಜಯಂತಿ, ಶಾದಿ ಭಾಗ್ಯ ಮಾಡಿದರು. ಮದುವೆಗೆಲ್ಲಾ ಹಣ ಕೊಡುವುಂತೆ ಮಾಡಿದರು‌ ಯಾಕೆ ಹಿಂದೂಗಳಲ್ಲಿ ಬಡವರು ಇಲ್ವಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ವತ್ಥ್ ನಾರಾಯಣ್ ಮಾತನಾಡಿ, ಸಿದ್ದರಾಮಯ್ಯ ಅವರು ಒಂದೊಳ್ಳೆ ಆಡಳಿತವನ್ನು ಕೊಟ್ಟು ಜನಪರ ಕೆಲಸ ಮಾಡಿದರೆ, ಎಲ್ಲಾ ಸಮುದಾಯಕ್ಕೂ, ಅಲ್ಪಸಂಖ್ಯಾತರಿಗೂ ಎಲ್ಲರಿಗೂ ಸಲ್ಲುವಂತದ್ದು ಆಗಬೇಕು. ಬರಿಜ ರಾಜಕೀಯ ಪ್ರೇರಿತವಾಗಿ, ಮತವನ್ನು ಗಮನದಲ್ಲಿಟ್ಟುಕೊಂಡು, ಕೋಮುವಾದಿಗಳು ಅಂತ ಇದ್ದರೆ ಅದು ಕಾಂಗ್ರೆಸ್ ಪಕ್ಷದವರು. ಯಾರಿಗೆ ಹಕ್ಕಿಲ್ಲ. ಪ್ರತಿಯೊಬ್ಬರ ಭಾರತೀಯನಿಗೂ ಸಮಾನವಾದ ಹಕ್ಕಿದೆ‌ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!