Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಂಎಲ್ಎ ಅಭ್ಯರ್ಥಿ ನಾನೇ ಎಂದ ಗೀತಾ ಭಾಷಣ ತಡೆದ ಸಿದ್ದರಾಮಯ್ಯ : ಕಣ್ಣೀರುಡುತ್ತಾ ಹೋದ ಆಕಾಂಕ್ಷಿ..!

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಣ ಇರುವುದು ಗೊತ್ತೆ ಇದೆ. ಒಂದು ಡಿಕೆಶಿ ಬಣ ಮತ್ತೊಂದು ಸಿದ್ದರಾಮಯ್ಯ ಬಣ. ಇಂದು ಡಿಕೆಶಿ ಬಣದ ಮಹಿಳೆಯ ಭಾಷಣಕ್ಕೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅದರಲ್ಲೂ ತನ್ನನ್ನು ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದಕ್ಕೆ ಸಿದ್ದರಾಮಯ್ಯ ಆ ರೀತಿ ತಡೆದಿದ್ದಾರೆ.

ಇಂದು ದಾಸರಹಳ್ಳಿಯಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ಏರ್ಪಾಡು ಮಾಡಲಾಗಿತ್ತು. ಈ ಕಾರ್ಯಕ್ರಮ ವೇದಿಕೆಯಲ್ಲಿ ಭಾಷಣ ಮಾಡಲು ಹೋದ ಗೀತಾ ಶಿವರಾಮ್, ನಾನೇ ಎಂಎಲ್ಎ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಂಡಿದ್ದರು. ಇದನ್ನು ಕೇಳಿಸಿಕೊಂಡ ಸಿದ್ದರಾಮಯ್ಯ ಅವರ ಭಾಷಣ ತಡೆಯಲು ಯತ್ನಿಸಿದರು‌ ಇದರಿಂದ ಗೀತಾ ಶಿವರಾಮ್ ವೇದಿಕೆಯಿಂದ ಅಳುತ್ತಾ ಕೆಳಗಿಳಿದರು.

ಬಳಿಕ ಸಿದ್ದರಾಮಯ್ಯ ಅವರು ವೇದಿಕೆ ಮೇಲೆರಿ ಭಾಷಣ ಮಾಡಿದರು. ಆದರೆ ಭಾಷಣ ಶುರು ಮಾಡುವುದಕ್ಕೂ ಮುನ್ನವೇ ಸಿದ್ದರಾಮಯ್ಯ ಅವರ ಹೆಸರನ್ನು ಜೋರಾಗಿ ಕೂಗಲು ಶುರು ಮಾಡಿದರು. ಬಳಿಕ ಎಲ್ಲರನ್ನು ಸುಮ್ಮನೆ ಇರಲು ಸೂಚಿಸಿದರು. ಆದರೂ ಸುಮ್ಮನೆ ಇರದೆ ಇದ್ದಾಗ ಮತ್ತೊಮ್ಮೆ ಗದರಿದ್ದಾರೆ. ಕಾರ್ಯಕ್ರಮ ಮಾಡುವುದು ದೊಡ್ಡದಲ್ಲ, ಶಿಸ್ತು ಮುಖ್ಯ ಎಂದಿದ್ದಾರೆ.

ಕಾರ್ಯಕ್ರಮದ ಆಯೋಜಕರ ಬಗ್ಗೆ ಸಿದ್ದರಾಮಯ್ಯ ಗರಂ ಆಗಿದ್ದರು. ವೇದಿಕೆ ಮೇಲೆ ಇದ್ದ ಕಾರ್ಯಕರ್ತರನ್ನು ಕೆಳಗಿಳಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಕಾರ್ಯಕ್ರಮದಲ್ಲಿ ಶಿಸ್ತಿನ ಪಾಠ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!