ಬಾದಾಮಿಯಲ್ಲಿ ಬಿಜೆಪಿ, ಜೆಡಿಎಸ್ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ..!

suddionenews
1 Min Read

ಬಾಗಲಕೋಟೆ: ಬಾದಾಮಿ ಭೇಟಿ ಕೊಟ್ಟಿರುವ ಸಿದ್ದರಾಮಯ್ಯ ಇಂದು ಮಾತನಾಡುವಾಗ ಹೊಸ ಬಾಂಬ್ ಸಿಡಿಸಿದ್ದಾರೆ. ಅದು ಜೆಡಿಎಸ್ ಮತ್ತು ಬಿಜೆಪಿ ನಾಯಕರ ಬಗ್ಗೆ.

ಹೌದು ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿಯ ಕೆಲ ನಾಯಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ. ಅವರು ಯಾರು, ಎಷ್ಟು ಜನ ಸಂಪರ್ಕದಲ್ಲಿದ್ದಾರೆಂದು ಹೇಳಲು ಸಾಧ್ಯವಿಲ್ಲ ಎಂದು ಕುತೂಹಲವನ್ನ ಹೆಚ್ಚಿಸಿದ್ದಾರೆ.

ಇನ್ನು ಇದೇ ವೇಳೆ ಕುಮಾರಸ್ವಾಮಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ತುಮಕೂರು ಅವರಪ್ಪನ ಆಸ್ತಿಯೂ ಅಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ. ಅದು ಸಾರ್ವಜನಿಕರ ಆಸ್ತಿ. ಅದು ಸಾಮಾನ್ಯ ಜ್ಞಾನ. ಟೀಕೆಗಳನ್ನ ಸಹಿಸಿಕೊಳ್ಳುವ ಶಕ್ತಿ ಇದ್ದರೆ ಮಾತ್ರ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಲು ಸಾಧ್ಯ ಎಂದು ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *