Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಣ್ಣ ಮನೆಗೆ ಸಿದ್ದರಾಮಯ್ಯ ಭೇಟಿ : ನಾಟಿ ಕೋಳಿ ತಿಂದು ಹೇಳಿದ್ದೇನು..?

---Advertisement---

ತುಮಕೂರು: ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ರಾಜಣ್ಣ ಅವರ ಮನೆಗೆ ಹೋಗಿ ತನ್ನಿಷ್ಟದ ಊಟವನ್ನು ಸವಿದು ಬಂದಿದ್ದಾರೆ. ಇದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ತುಮಕೂರಿನಲ್ಲಿ ಇಂದು ನಡೆದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಕೆ.ಎನ್.ರಾಜಣ್ಣ ಮನೆಗೆ ಭೇಟಿ ನೀಡಿ, ಊಟ ಸವಿದಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕೆ.ಎನ್.ರಾಜಣ್ಣ ನಿವಾಸದಲ್ಲಿ ಮಾಡಿಸಿದ್ದ ಊಟ ತುಂಬಾ ಚೆನ್ನಾಗಿತ್ತು. ಕಾಲ್ ಸೂಪ್ ಮಾಡಿದ್ರು. ನಾಟಿ ಕೋಳಿ ತಂದು ಅಡುಗೆ ಮಾಡಿಸಿದ್ದರು. ನನಗೆ ಹುಷಾರಿರಲಿಲ್ಲ. ನಾಲಿಗೆ ಕೆಟ್ಟಿತ್ತು. ಹೀಗಾಗಿ ಊಟ ಚೆನ್ನಾಗಿತ್ತು ತಿಂದೆ ಎಂದು ಸಿಎಂ ಸಿದ್ದರಾಮಯ್ಯ ಅವರು ರಾಜಣ್ಣ ಭೇಟಿ ಬಗ್ಗೆ ಮಾಹಿತಿ ನೀಡಿದರು. ಅಷ್ಟೇ ಅಲ್ಲ ರಾಜಣ್ಣ ಅವರು ಕೂಡ ಸಿದ್ದರಾಮಯ್ಯ ಅವರಿಗೋಸ್ಕರ ನಾಟಿ ಕೋಳಿ ಸಾರು, ಕಾಲ್ ಸೂಪು, ಮುದ್ದೆ ಮಾಡಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಪ್ರೀತಿಯಿಂದ ಸವಿದರು.

ಶಾಸಕ ರಾಜಣ್ಣ ಅವರು ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಹಕಾರಿ ಸಚಿವರಾಗಿದ್ದರು. ಆದರೆ ಅವರದ್ದೇ ಪಕ್ಷದಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರಿ ಬಗ್ಗೆ ಆರೋಪ ಮಾಡಿದ್ದರು. ನಮ್ಮ ಪಕ್ಷದಿಂದಾನೂ ತಪ್ಪಾಗಿದೆ ಎಂದೇ ರಾಜಣ್ಣ ಅವರು ಆಡಿದ್ದ ಮಾತು, ಹೈಕಮಾಂಡ್ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ತಮ್ಮ ಸಚಿವ ಸ್ಥಾನವನ್ನು ಕಳೆದುಕೊಂಡರು. ಸಿಎಂ ಸಿದ್ದರಾಮಯ್ಯ ಅವರು ಕೂಡ ತಮ್ಮ ಸಂಪುಟದಲ್ಲಿಯೇ ಉಳಿಸಿಕೊಳ್ಳಲು ಸಾಕಷ್ಟು ಶ್ರಮಪಟ್ಟರು. ಆದರೂ ಅದು ಸಾಧ್ಯವಾಗಲಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...