Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

40 ಜನರನ್ನು ಕೊಂಡುಕೊಳ್ಳಲು ಹಣ ಎಲ್ಲಿಂದ ಬಂತು?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Facebook
Twitter
Telegram
WhatsApp

 

ಮೈಸೂರು: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಉದ್ಧವ್ ಠಾಕ್ರೆ ಸರ್ಕಾರ ಬೀಳಿಸಲು ಎಲ್ಲಾ ತಯಾರಿಯೂ ನಡೆದಿದೆ. ಈ ಸಂಬಂಧ ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಕಳೆದ ಸಲ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಅಧಿಕಾರ ಕೊಟ್ಟಿದ್ದರಾ. 144 ಬರಬೇಕಿತ್ತು. ಆದರೆ ಅವರು ಗೆದ್ದಿದ್ದು 104. ಅದನ್ನ ಇಟ್ಟುಕೊಂಡು ಅಧಿಕಾರ ಹಿಡಿಯೋದಕ್ಕೆ ಪ್ರಜಾ ಪ್ರಭುತ್ವದಲ್ಲಿ ಅವಕಾಶವಿಲ್ಲ ಎಂದಿದ್ದಾರೆ.

40 ಜನ ದುಡ್ಡು ಕೊಟ್ಟು ಕೊಂಡುಕೊಳ್ಳುತ್ತೀವಿ ಅಂದ್ರೆ ಈ ದುಡ್ಡು ಎಲ್ಲಿಂದ ಬಂದಿರುತ್ತೆ. 25 ಕೋಟಿ, 30 ಕೋಟಿ ಹಿಂಗೆ ಕೊಡ್ತಾ ಇದ್ದಾರೆ. ಎಲ್ಲಿಂದ ಬಂದಿರುತ್ತೆ ಈ ದುಡ್ಡು. ಭ್ರಷ್ಟಾಚಾರದ ಹಣವಲ್ಲವಾ ಇದು. ಭ್ರಷ್ಟಾಚಾರ ಮಾಡದೆ ಹಣ ಎಲ್ಲಿಂದ ಬರುತ್ತೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಚಾರವೂ ಮುಗಿಲು ಮುಟ್ಡಿದೆ. ಜನ ವೋಟು ಕೊಟ್ಟಿರುವುದು ಬಿಜೆಪಿ ವಿರುದ್ಧವಾಗಿ ಕೊಟ್ಟಿದೆ. ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಐದು ವರ್ಷ ಮಾಡುವುದಕ್ಕೆ ಬಿಡಬೇಕು. ಇಲ್ಲದೆ ಹೋದರೆ ಜನ ಕೊಟ್ಟಿರುವ ತೀರ್ಮಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ.

ಶಿವಸೇನೆ ಪ್ರಶ್ನೆ ಅಲ್ಲ. ಕಾಂಗ್ರೆಸ್ ಮತ್ತು ಸಮ್ಮಿಶ್ರ ಸರ್ಕಾರ ಸೇರಿ ಸರ್ಕಾರ ನಡೆಸುತ್ತಾ ಇತ್ತು. ಶಿವಸೇನ ಮುಖ್ಯಮಂತ್ರಿಯಾಗಿದೆ ಅಷ್ಟೇ. ಅಲ್ಲಿ ಮೂರು ಪಾರ್ಟಿ ಸೇರಿ ಮಾಡಿರುವ ಸರ್ಕಾರ. ಅವರಿಗೆ ಸರ್ಕಾರ ನಡೆಸಲು ಬಿಡಬೇಕು. ಕರ್ನಾಟಕದಲ್ಲೂ ಅದೇ ಮಾಡಿದ್ದು, ಈಗ ಮಹಾರಾಷ್ಟ್ರದಲ್ಲೂ ಅದನ್ನೇ ಮಾಡಲೂ ಹೊರಟಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!