Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಗುಲಗಳಿಗೆ ಸ್ವಾತಂತ್ರ್ಯ ವಿಚಾರ : ಅಂಬಾನಿ, ಅದಾನಿಗೆ ಒತ್ತೆ ಇಡಲಿದ್ದಾರೆ ಎಂದ ಸಿದ್ದರಾಮಯ್ಯ..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ಅಡಿ ಇರುವ ದೇವಸ್ಥಾನಗಳನ್ನು ಸ್ವತಂತ್ರಗೊಳಿಸುವ ನಿಟ್ಟಿನಲ್ಲಿ ಯೋಚನೆ ಮಾಡಿದೆ. ಆ ಬಗ್ಗೆ ಈಗಾಗಲೇ ಕೆಲಸವು ನಡೆಯುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಜನರು ಇವರ ದುಷ್ಟ ಹುನ್ನಾರಗಳನ್ನ ಅರ್ಥ ಮಾಡಿಕೊಳ್ಳಬೇಕು. ಧರ್ಮ, ದೇವರು, ಚರ್ಚ್, ಮಸೀದಿಗಳ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಹಾಗೇ ಎಲ್ಲದನ್ನು ಅಂಬಾನಿ, ಅದಾನಿಗೆ ಡಂಬ ಬಂಡವಾಳ ಶಾಹಿಗಳಿಗೆ ಅಡಮಾನ ಇಡುತ್ತಿದ್ದಾರೆ. ಇದು ಮನುವಾದಿಗಳ ಪುರಾತನ ಅಜೆಂಡಾ.

ಬಿಜೆಪಿಯೂ ಆರಂಭದಿಂದಲೂ ಸುಳ್ಳುಗಳ ಫ್ಯಾಕ್ಟರಿ. ಸುಳ್ಳುಗಳನ್ನೇ ಮಾರಿ ರಾಜಕಾರಣ ಮಾಡುತ್ತಿದ್ದಾರೆ. ದೇವಸ್ಥಾನಗಳು ಈಗಲೂ ಸ್ವತಂತ್ರವಾಗಿಯೆ ಇವೆ. ಸರ್ಕಾರ ಅನೇಕ ದೇವಸ್ಥಾನಗಳಿಗೆ ನೆರವು ನೀಡುವುದರ ಮೂಲಕ ಅವುಗಳನ್ನು ಪೊರೆಯುತ್ತಿದೆ. ಮುಜರಾಯಿ ಇಲಾಖೆಯ ವಾರ್ಷಿಕ ಬಜೆಟ್ಟು ಸುಮಾರು 350 ಕೋಟಿಗಳಷ್ಟಿದೆ. ಸರ್ಕಾರವೇ ದೇವಸ್ಥಾನಗಳನ್ನು ನಡೆಸುವುದೆಂದರೆ ಸಮಾಜದ ಕಟ್ಟ ಕಡೆಯ ಮನುಷ್ಯರಿಗೂ ಅವುಗಳ ಮೇಲೆ ಹಕ್ಕುಗಳು ಇವೆಯೆಂದು ಅರ್ಥ. ಸರ್ಕಾರ ದೇವಸ್ಥಾನಗಳ ಮೇಲಿನ ಹಿಡಿತವನ್ನು ತಪ್ಪಿಸುವುದೆಂದರೆ ಜನ ಸಮುದಾಯಗಳಿಗೆ ಇರುವ ಅಧಿಕಾರವನ್ನು ತಪ್ಪಿಸುವುದೆಂದು ಅರ್ಥ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ : ಸಿಎಂ ಹೇಳಿದ್ದೇನು..?

ಬೆಂಗಳೂರು: ನಿನ್ನೆ ಹುಬ್ಬಳ್ಳಿ ಕಾಲೇಜಿನಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನೇ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದನ್ನು ಲವ್ ಜಿಹಾದ್ ಎಂದೇ ಬಿಂಬಿಸುತ್ತಿದ್ದಾರೆ. ಈ ಸಂಬಂಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರಿಗೆ ಶಿಕ್ಷೆಯಾಗುವ

ರಾಜ್ಯದಲ್ಲಿ ಮಳೆ ಆರಂಭ: ಶಿವಮೊಗ್ಗದಲ್ಲಿ ಒಬ್ಬ ಸಾವು, ದಾವಣಗೆರೆಯಲ್ಲಿ 25 ಮೇಕೆ ಸಾವು : ಎಲ್ಲೆಲ್ಲಿ ಏನೇನು ಅನಾಹುತ..?

ಬೆಂಗಳೂರು: ರಾಜ್ಯಾದ್ಯಂತ ಮಳೆ ಭರ್ಜರಿಯಾಗಿ ಸುರಿಯುತ್ತಿದೆ. ಎಲ್ಲೆಡೆ ಸಂಪಾಗಿ ಮಳೆ ಬರುತ್ತಿದೆ‌. ಕಳೆದ ಬಾರಿ ಹಿಂಗಾರು-ಮುಂಗಾರು ಕೈಕೊಟ್ಟ ಕಾರಣಕ್ಕೆ ರೈತರು ತಲೆ ಮೇಲೆ ಕೈಹೊತ್ತು ಕೂತಿದ್ದರು. ಇದೀಗ ಮಳೆ ಆರಭವಾಗಿದ್ದು, ರೈತರ ಮೊಗದಲ್ಲಿ ಸಂತಸ

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

error: Content is protected !!