Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಚಿಕೆ ಆಗಲ್ವಾ ನಿಮ್ಗೆ : ಹೀಗಂದಿದ್ಯಾಕೆ ಸಿದ್ದರಾಮಯ್ಯ..?

Facebook
Twitter
Telegram
WhatsApp

ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದೆ ತಡ ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷಗಳು ಬ್ಯುಸಿಯಾಗಿವೆ. ಜೊತೆಗೆ ಟಿಕೆಟ್ ಆಕಾಂಕ್ಷಿಗಳು ಜಾಸ್ತಿಯಾಗುತ್ತಿದ್ದಾರೆ. ಈ ಮಧ್ಯೆ ಟಿಕೆಟ್ ಕೇಳಲು ಬಂದ ಅಭ್ಯರ್ಥಿಗೆ ಸಿದ್ದರಾಮಯ್ಯ ರೇಗಾಡಿರುವ ಘಟನೆ ನಡೆದಿದೆ.

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಮುಖಂಡ ಕೆ ಮರೀಗೌಡ ಅವರಿಗೆ ಟಿಕೆಟ್ ನೀಡಬೇಕೆಂಬುದು ಅವರ ಬೆಂಬಲಿಗರ ಆಸೆ. ಅದರಂತೆ ಜಿಲ್ಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರ ಬಳಿ ಆ ಆಸೆ ಆಕಾಂಕ್ಷೆಯನ್ನ ವ್ಯಕ್ತಪಡಿಸಿದ್ದಾರೆ. ಆಗ ಸಿದ್ದರಾಮಯ್ಯ ನಿಮ್ಗೆ ನಾಚಿಕೆಯಾಗಲ್ವಾ ಎಂದು ಗದರಿದ್ದಾರೆ.

ಚಾಮುಂಡಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲನ್ನ ಅನುಭವಿಸಿರುವ ಬೇಸರ ಸಿದ್ದರಾಮಯ್ಯ ಅವರಿಗೆ ಹಾಗೆಯೇ ಇದೆ ಎಂಬುದು ಗೊತ್ತಾಗುತ್ತಿದೆ. ಯಾಕಂದ್ರೆ ಜಿಲ್ಲೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರ ಮನೆ ಮುಂದೆ ಮರೀಗೌಡ ಅವರ ಬೆಂಬಲಿಗರು ಮತ್ತು ಕಾರ್ತಕರ್ತರು ಜಮಾಯಿಸಿದ್ದರು. ಸಿದ್ದರಾಮಯ್ಯ ಕಾರು ಹತ್ತಲು ಬಂದಾಗ ಮರೀಗೌಡ ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರು ಮತ್ತು ಬೆಂಬಲಿಗರು ಒತ್ತಾಯಿಸಿದ್ರು. ಇದನ್ನ ಕೇಳಿಸಿಕೊಂಡ ಸಿದ್ದರಾಮಯ್ಯ ಅವರು ಕೊಂಚ ಕೋಪಿತಗೊಂಡಿದ್ದಾರೆ.

ನನ್ನನ್ನು ಸೋಲಿಸಿ, ಈಗ ಟಿಕೆಟ್ ಕೇಳಲು ಬಂದಿದ್ದೀರಾ..? ನಿಮ್ಗೆ ನಾಚಿಕೆ ಆಗಲ್ಲವಾ ಎಂದು ಪ್ರಶ್ನಿಸಿದ್ದಾರೆ. ಯಾರಿಗೆ ಏನು ಕೊಡಬೇಕು ಅಂತ ನನಗೆ ಗೊತ್ತು ಎಂದು ನೆರೆದಿದ್ದ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಗದರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!