Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರುಣಾದಲ್ಲಿ ಯುದ್ಧ ಮಿಸ್ ಆಯ್ತು ಎಂದುಕೊಳ್ಳುವಾಗಲೇ ಕೋಲಾರದಲ್ಲೂ ಸಿದ್ದರಾಮಯ್ಯ ಹಿಂದೆ ಬಿದ್ದ ಬಿಜೆಪಿ..!

Facebook
Twitter
Telegram
WhatsApp

ಕೋಲಾರ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಟಾರ್ಗೆಟ್. ಅವರು ಎಲ್ಲಿ ನಿಲ್ಲುತ್ತಾರೋ ಅಲ್ಲಿಂದ ಬಿಜೆಪಿಯ ಸ್ಟ್ರಾಂಗ್ ಕ್ಯಾಂಡಿಡೇಟ್ ಹಾಕಬೇಕು ಎಂದಾಗಿತ್ತು. ವರುಣಾದಲ್ಲಿ ನಿಂತರೆ ಬಿಎಸ್ವೈ ಪುತ್ರ ವಿಜಯೇಂದ್ರ ಅವರನ್ನು ನಿಲ್ಲಿಸುವ ಪ್ಲ್ಯಾನ್ ನಲ್ಲಿತ್ತು ಬಿಜೆಪಿ. ಆದರೆ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಆಯ್ಕೆ ಮಾಡಿಕೊಂಡ ಬಳಿಕ ಬಿಜೆಪಿ ಪ್ಲ್ಯಾನ್ ಸೈಲೆಂಟ್ ಆಗಿತ್ತು. ಒಂದೊಳ್ಳೆ ಫೈಟ್ ಮಿಸ್ ಆಯ್ತು ಅಂತ ರಾಜಕೀಯ ಆಸಕ್ತಿದಾಯಕರು ಮನಸ್ಸಲ್ಲಿಯೇ ಬೇಸರ ಮಾಡಿಕೊಂಡು ಸುಮ್ಮನೆ ಆಗಿದ್ದರು.

ಆದರೆ ಬಿಜೆಪಿ ಮಾತ್ರ ಸಿದ್ದರಾಮಯ್ಯ ಅವರನ್ನು ಬಿಡುವಂತೆ ಕಾಣುತ್ತಿಲ್ಲ. ವರುಣಾ, ಬಾದಾಮಿ ಅಲ್ಲದೆ ಹೋದರೇ ಏನು ಕೋಲಾರದಲ್ಲೂ ಬರ್ತೀವಿ ಅಂತ ಅವರ ಹಿಂದೆ ಹೊರಟಿದ್ದಾರೆ. ಅದರಲ್ಲೂ ಪಕ್ಷ ಸಂಘಟನೆಯ ಚತುರ ಎಂದೇ ಖ್ಯಾತಿ ಪಡೆದಿರುವ ಬಿಎಲ್ ಸಂತೋಷ್ ಅಖಾಡಕ್ಕೆ ಇಳಿದಿದ್ದಾರೆ. ಸಾಲು ಸಾಲು ಸಭೆಗಳನ್ನು ಮಾಡಿದ್ದು, ಕೋಲಾರದ ಪ್ರವಾಸಕ್ಕೆ ಸಜ್ಜಾಗಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಹೈವೋಲ್ಟೇಜ್ ಸಭೆ ನಡೆಸಿದ್ದು, ಈ ಬಾರಿ ಚುನಾವಣೆಯನ್ನು ಗೆಲ್ಲುವುದು ಹೇಗೆ..? ಪಕ್ಷ ಸಂಘಟನೆ ಮಾಡುವುದು ಹೇಗೆ..? ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದು, ಕೋಲಾರ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳನ್ನು ಕರೆಸಿ ಚರ್ಚೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಟಿಕೆಟ್ ಘೋಷಣೆಯನ್ನು ಯಾರು ಮಾಡಬಾರದು ಎಂದು ಪಕ್ಷದ ನಾಯಕರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮತಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಸಿದ್ದರಾಮಯ್ಯ, ಬಹಳಷ್ಟು ಯೋಚನೆ ಮಾಡಿ, ಅಳೆದು ತೂಗಿ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿಂದಾನೇ ಸ್ಪರ್ಧಿಸಿ ಗೆಲುವು ಕಾಣುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!