Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯನವರು ಐದು ವರ್ಷ ಸಿಎಂ ವಿಚಾರ : ನನ್ನ ಸಮ್ಮತಿ ಇದೆ :  ಕಾರ್ಮಿಕ ಸಚಿವ ಸಂತೋಷ ಲಾಡ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ. (ನ. 03):  ರಾಜ್ಯದ ಮುಖ್ಯಮಂತ್ರಿಗಳ ಬದಲಾವಣೆಯ ವಿಚಾರ ಪಕ್ಷದ ಹೈಕಮಾಂಡಿಗೆ ಬಿಟ್ಟದ್ದು, ಇದರಲ್ಲಿ ಯಾವ ಮಂತ್ರಿಯಾಗಲಿ, ಶಾಸಕರಾಗಲಿ ಮಾತು ನಡೆಯುವುದಿಲ್ಲ ಸಿದ್ದರಾಮಯ್ಯರವರು ಐದು ವರ್ಷ ಸಿಎಂ ಆಗಿರುವುದಕ್ಕೆ ನನ್ನ ಸಮ್ಮತಿ ಇದೆ ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭೇಟಿಯಾದ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಈಗಾಗಲೇ ಸಚಿವ ಸಂಪುಟವೂ ಸಹಾ ನಿರ್ಮಾಣವಾಗಿದೆ. ಈಗ ಕೆಲವರು ಮುಂದಿನ ಎರಡುವರೆ ವರ್ಷದಲ್ಲಿ ಸಚಿವ ಸಂಪುಟ ಬದಲಾವಣೆಯಾಗುತ್ತದೆ ಎನ್ನುತ್ತಿದ್ದಾರೆ ಇದರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಣಯ ಮಾಡಲಿದೆ. ಇಲ್ಲಿ ನಾವು ಹೇಳಿದ ಮಾತ್ರಕ್ಕೆ ಸಚಿವ ಸಂಪುಟ ಬದಲಾವಣೆಯಾಗುವುದಿಲ್ಲ ಶಾಸಕರ, ಹೈಕಮಾಂಡ್‍ನ ತೀರ್ಮಾನ ಮುಖ್ಯವಾಗಿದೆ ಎಂದು ತಿಳಿಸಿದರು.

ಮುಂದಿನ 5 ವರ್ಷಗಳ ನಾನೇ ಸಿಎಂ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ನನ್ನ ಸಹಮತ ಇದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆದ ದಿನದಿಂದ ಎರಡೂವರೆ ವರ್ಷ ಸಿಎಂ ಸ್ಥಾನ ಹಂಚಿಕೆ ಆಗಿದೆಯಾ ಎಂಬ ಪ್ರಶ್ನೆ ಬಹಳಷ್ಟು ಜನರು ಕೇಳುತ್ತಿದ್ದರು ಅದಕ್ಕೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನೇ 5 ವರ್ಷ ಸಿಎಂ ಎಂದು ಹೇಳುವ ಮೂಲಕ ಎಲ್ಲಾ ಚರ್ಚೆ ಹಾಗೂ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಯಾರು ಕೂಡ ಮತ್ತೇ ಮಾತನಾಡಬಾರದು. ಪಕ್ಷದ ಹೈ ಕಮಾಂಡ್ ಹಾಗೂ ಶಾಸಕರು ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಸಚಿವ ಸತೀಶ್ ಜಾರಕೀಹೊಳೆ ಹಾಗೂ ಡಿ ಕೆ ಶಿವಕುಮಾರ್ ಗುಂಪುಗಳನ್ನು ಕಟ್ಟಿಕೊಂಡು ಶಾಸಕರ ಬೆಂಬಲ ಇದೆ. ನಾವು ಕೂಡ ಸಿಎಂ ಆಕಾಂಕ್ಷಿ ಎಂದಿರುವ ಕುರಿತು ನನಗೆ ತಿಳಿದಿಲ್ಲ ಎಂದಷ್ಟೇ ಹೇಳಿದ ಅವರು, ಎಲ್ಲರೂ ಕೂಡ ನಮ್ಮ ಪಕ್ಷದವರೇ ಆಗಿದ್ದು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ. ಅಭಿಪ್ರಾಯಗಳು ಇವೆ ಅಷ್ಟೇ ಎಂದರು.

ಕಾಂಗ್ರೆಸ್ ಪಕ್ಷದ 60 ಜನ ಶಾಸಕರ ಬೆಂಬಲ ನಮಗಿದೆ ಎಂದು ಅಪರೇಷನ್ ಕಮಲ ಮಾಡಲು ಹೊರಟಿರುವ ಬಿಜೆಪಿ ಅವರು ಕುರಿತು ಮಾತನಾಡಿದ ಅವರು, ಬಿಜೆಪಿಯವರಿಗೆ ಇದೀಗ ಮಾಡಲು ಏನು ಕೆಲಸ ಇಲ್ಲ. ಅವರ ಪಕ್ಷ ಅಧಿಕಾರದಲ್ಲಿರದೆ ಬೇರೆ ಪಕ್ಷ ಅಧಿಕಾರದಲ್ಲಿದ್ದಾಗ ಅದನ್ನು ಹೇಗೆ ಬಿಳಿಸಬೇಕು ಎಂಬುವುದನ್ನು ಚಾಳಿಯಾಗಿ ಬೆಳೆಸಿಕೊಂಡಿದ್ದು, ಸಿಬಿಐ ಇಡಿ, ಲೋಕಾಯುಕ್ತ ಎಂದು ತಮ್ಮ ಅಧಿಕಾರವನ್ನು ಬಳಸಿಕೊಂಡು ಮನಬಂದಂತೆ ದಾಳಿ ಮಾಡಿಸಿ, ಆರೋಪಗಳನ್ನು ಮಾಡಿ ಮಾನಸಿಕವಾಗಿ ಕುಗ್ಗಿಸಿ ಬಿಜೆಪಿಗೆ ಕರೆದುಕೊಳ್ಳುವುದು ಅವರ ಹವ್ಯಾಸವಾಗಿದೆ. ಆರೋಪ ಹೊತ್ತ ವ್ಯಕ್ತಿ ಬಿಜೆಪಿಗೆ ಹೋದರೆ ವಾಷಿಂಗ್ ಪೌಡರ್ ನಿರ್ಮಾ ಇದ್ದ ಆಗೆ. ಅಲ್ಲಿ ಎಲ್ಲಾ ತೊಳೆದುಬಿಡುತ್ತಾರೆ ನಂತರ ಆ ವ್ಯಕ್ತಿ ಪರಿಶುದ್ದ ಆಗಿಬಿಡುತ್ತಾನೆ. ಈ ಕೆಲಸವನ್ನು ಬಿಜೆಪಿ ಕಳೆದ 9 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದು, ಈಗಲೂ ಅದನ್ನೆ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ದೂರಿದರು.

ಹೈಕಮಾಂಡ್ ನಾಯಕರು ರಾಜ್ಯಕ್ಕೆ ಬರುವುದೇ ವಸೂಲಿಗೊಸ್ಕರ ಎಂದಿರುವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಎಲ್ಲರಿಗೂ ತಿಳಿದಿದೆ. ಈ ಮೊದಲು ಬಿಜೆಪಿ ಯವರ ಬಗ್ಗೆ ಮಾತನಾಡುತ್ತಿದ್ದ ಕುಮಾರಣ್ಣ ಇದೀಗ ಕಾಂಗ್ರೇಸ್ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ನಮ್ಮ ಬಗ್ಗೆ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಅದನ್ನು ನಿಲ್ಲಿಸಿ ಬರಗಾಲ, ರೈತರು, ಶಿಕ್ಷಣ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳ ಬಗ್ಗೆ ಮಾತನಾಡಬೇಕು ಎಂದು ಸಲಹೆ ನೀಡಿದರು.

ನಮ್ಮ ಇಲಾಖೆಯಲ್ಲಿ ಕಾರ್ಮಿಕರಿಗೆ ನೀಡಿದ ವಿವಿಧ ರೀತಿಯ ವಸ್ತುಗಳು ಕಳಪೆಯಾಗಿದೆ ಎಂಬ ದೂರು ಇದೆ ಇದರ ಬಗ್ಗೆ ಅಧಿಕಾರಿಗಳ ತಂಡವನ್ನು ರಚನೆ ಮಾಡಲಾಗಿದೆ ಅವರು ವರದಿ ನೀಡಿದ ನಂತರ ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುವುದು ಅಲ್ಲದೆ ಈ ವಸ್ತುಗಳನ್ನು ಖರೀದಿ ಮಾಡಿದ್ದು ಬಿಜೆಪಿ ಸರ್ಕಾರ ಇದ್ದಾಗ ವಿತರಣೆ ಮಾಡಿದ್ದು ಸಹಾ ಬಿಜೆಪಿ ಸರ್ಕಾರ ಇದ್ದಾಗ ಎಂದು ಸಂತೋಷ ಲಾಡ್ ತಿಳಿಸಿದರು.

ಜಿಲ್ಲಾ ಡಿಸಿಸಿ ಅಧ್ಯಕ್ಷ ತಾಜ್‍ಪೀರ್, ಲಿಡ್ಕರ್ ನಿಗಮದ ಮಾಜಿ ಅಧ್ಯಕ್ಷ ಈ.ಶಂಕರ್, ಜಿ.ಪಂ.ಮಾಜಿ ಸದಸ್ಯ ನರಸಿಂಹರಾಜು, ಕಾಂಗ್ರೆಸ್ ಮುಖಂಡ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ರಾಮನಾಯ್ಕ್, ಖುದ್ದುಸ್, ಲಕ್ಷ್ಮೀಕಾಂತ್, ಶಾಶಕರ ಸಹೋದರ ನಾಗರಾಜ್, ಪರಮೇಶ್, ವಿಜಯಕುಮಾರ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರೈತರಿಗೆ ಬೆಳೆ ವಿಮೆ ಮತ್ತು ಬರ ಪರಿಹಾರ ವಿಮೆ ಹಣ ತುರ್ತಾಗಿ ನೀಡುವಂತೆ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ, ಸೋಮಗುದ್ದು ಗ್ರಾಮ ಪಂಚಾಯಿತಿಗಳಿಗೆ ಸೇರಿದ ಹಳ್ಳಿಗಳ ಬೆಳೆ

ಅಕ್ರಮ ಮದ್ಯ ಮಾರಾಟ : ಕಾನೂನು ಕ್ರಮಕ್ಕೆ ರೈತ ಸಂಘ ಹಾಗೂ ಮಹಿಳಾ ಸಂಘಟನೆಗಳ ಪ್ರತಿಭಟನೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕು ಕ್ಯಾತಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು

ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಮಹೋತ್ಸವ ನಂತರ ಸಾವು ತಂದ ಸೌಭಾಗ್ಯ ನಾಟಕ ಪ್ರದರ್ಶನ : ಸಿ.ಟಿ.ಕೃಷ್ಣಮೂರ್ತಿ ಮಾಹಿತಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06  : ಐತಿಹಾಸಿಕ ಚಿತ್ರದುರ್ಗ ನಗರದ ದೊಡ್ಡಪೇಟೆಯ ರಾಜಬೀದಿಯಲ್ಲಿ ಇನ್ನೂರು ವರ್ಷಗಳಿಂದಲೂ ಗ್ರಾಮ ದೇವತೆಗಳಾದ ಬರಗೇರಮ್ಮ-ತಿಪ್ಪಿನಘಟ್ಟಮ್ಮ

error: Content is protected !!