Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

---Advertisement---

 

2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ ರಚನೆಗೂ ಮುನ್ನ, ರಚನೆಯಾದ ಮೇಲೆ ಸಾಕಷ್ಟು ಸವಾಲುಗಳನ್ನು ಎದುರಿಸಿದೆ. ಆದರೆ ಈ ಎಲ್ಲಾ ಸವಾಲುಗಳ ನಡುವೆ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಯಶಸ್ವಿ ಕೂಡ ಆಗಿದೆ.

ಸಿದ್ದರಾಮಯ್ಯ ಸರ್ಕಾರ ರಚನೆಯಾದ ಮೇಲೆ‌ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿತು. ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಅಂತಹ ಯೋಜನೆಗಳನ್ನು ಬಡವರಿಗಾಗಿಯೇ ತಂದಿತ್ತು. ಆದರೆ ಅನ್ನಭಾಗ್ಯ ಯೋಜನೆಗೆ ಸಾಕಷ್ಟು ಸವಾಲು ಎದುರಾಗಿತ್ತು. ಕೇಂದ್ರದಿಂದ ಕೊಡ್ತೀವಿ ಎಂದಿದ್ದ ಅಕ್ಕಿಯನ್ನು ಕೊಡಲಿಲ್ಲ. ಬಳಿಕ ಆ ಅಕ್ಕಿಗೆ ಸಮನಾಗಿ ಹಣವನ್ನು ನೀಡುತ್ತಿದೆ. ಈ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ನಷ್ಟದಿಂದ ಕುಸಿಯುತ್ತೆ ಎಂದೇ ಬಿಜೆಪಿ ಪಕ್ಷ ವ್ಯಂಗ್ಯವಾಡಿತ್ತು. ಆದರೆ ಒಂದು ವರ್ಷ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

ಬರಗಾಲದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಬರ ಪರಿಹಾರ ಕೊಡಿಸಲು ಸಾಕಷ್ಟು ಶ್ರಮ ಹಾಕಿತ್ತು. ಕೇಂದ್ರ ಸರ್ಕಾರದ ತನಕ ಎಲ್ಲಾ ಶಾಸಕರ, ಸಚಿವರನ್ನು ಕರೆದುಕೊಂಡು ಹೋಗಿ ಹೋರಾಟ ಕೂಡ ಮಾಡಿದ್ದರು. ಹೀಗೆ ನಾನ ಸವಾಲುಗಳನ್ನು ಎದುರಿಸಿ, ಇಂದಿಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಇದರ ನಡುವೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸದಾ ಸರ್ಕಾರ ಉರುಳುವ ಮಾತನ್ನೇ ಆಡುತ್ತಾರೆ. ಲೋಕಸಭೆಯ ಬಳಿಕ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರಲ್ಲ ಅಂತಾನೇ ನುಡಿದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...