Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯರಿಗೆ ಸುತ್ತಿಕೊಂಡ ಮೂಡಾ ಕೇಸ್ : ಸಹೋದರ ಹೇಳಿದ್ದೇನು..?

Facebook
Twitter
Telegram
WhatsApp

ಮೈಸೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ವಿಪಕ್ಷ ನಾಯಕರು ಹೋರಾಟವನ್ನೇ ಮಾಡುತ್ತಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಅವರ ಪತ್ನಿ ಸೈಟ್ ಗಳನ್ನು ವಾಪಾಸ್ ನೀಡುತ್ತೇನೆಂದು ಹೇಳಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರ ಸಹೋದರ ಸಿದ್ದಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಆ ಕೆಲಸ ಮಾಡುವುದಕ್ಕೆ ಹೋಗಿಯೇ ಇಲ್ಲ. ಇದು ನಮ್ಮ ಅತ್ತಿಗೆಗೆ ಗೊತ್ತು, ಅವನಿಗೆ ಗೊತ್ತಿಲ್ಲ. ದಿನ ದಿನ ಮೂಡಾ ಸೈಟ್ ಅಂತ ಹೇಳ್ತಾ ಇದಾರೆ. ಬೆಳಗ್ಗೆ ತಾನೇ ವಾಪಸ್ ಕೊಟ್ರು ಅನ್ನೋದು ಗೊತ್ತಾಯ್ತು. ಇದ್ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಅಂತಾರೆ. ಅದೆಂಗೆ ಹಿಂದಕ್ಕೆ ಕೊಟ್ರು ಅಲ್ವಾ. ಯಾಕ್ ರಾಜೀನಾಮೆ ಕೊಡಬೇಕು. ಇವರ ಮೇಲೆ ಹೊರಿಸಬೇಕಲ್ಲ ಅಂತ ಹೊರಿಸಿದ್ದಾರೆ. 40 ವರ್ಷದಿಂದ ಒಂದು ಕಪ್ಪು ಚುಕ್ಕೆ ಬಿದ್ದಿಲ್ಲ. ಹೆಂಗಾದ್ರೂ ಮಾಡಿ ಕೆಡವಬೇಕು ಅಂತ ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಈ ಥರ ಮಾಡಿದ್ದಾರೆ.

ನಮ್ಮ ತಂದೆಯೇ ಸಾಕಷ್ಟು ಆಸ್ತಿ ಮಾಡಿದ್ದಾರೆ. ಮೂಡಾ ಸೈಟಿನ ವಿಚಾರ ನಮ್ಗೆ ಅಷ್ಟೊಂದು ಗೊತ್ತಿಲ್ಲ. ನಮ್ಮ ಅತ್ತಿಗೆಗೆ ಗೊತ್ತಿತ್ತೇನೋ ಆದರೆ ಅವರಿಗೆ ಗೊತ್ತಿಲ್ಲ. ಅಪ್ಪನ ಆಸ್ತಿ ಬಿಟ್ಟು ಬೇರೆ ಯಾವ ಆಸ್ತಿಯನ್ನು ಮಾಡಿಲ್ಲ ಎಂದು ಸಿದ್ದಣ್ಣ ಅವರು ಸ್ಪಷ್ಟನೆ ನೀಡಿದ್ದಾರೆ. ಪಾರ್ವತಿ ಅವರಿಗೆ ಅರಿಶಿನ ಕುಂಕುಮಕ್ಕೆ ಬಂದಿದ್ದು ಸಿದ್ದರಾಮಯ್ಯ ಅವರಿಗೆ ಮಾಹಿತಿ ಇಲ್ಲ. ಇದಕ್ಕೂ ನನಗೂ ಸಂಬಂಧವಿರಲಿಲ್ಲ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಸಾಕಷ್ಟು ಸಲ ಹೇಳಿದ್ದಾರೆ. ಈಗ ಅವರ ಸಹೋದರ ಕೂಡ ಅದನ್ನೇ ಹೇಳುತ್ತಿದ್ದಾರೆ. ರಾಜಕಾರಣದಲ್ಲಿ ಇಷ್ಟೆಲ್ಲ ಬೆಳವಣಿಗೆಯಾದ ಬೆನ್ನಲ್ಲೇ ಪಾರ್ವತಿ ಅವರು ಮೂಡಾ ಸೈಟುಗಳನ್ನು ವಾಪಾಸ್ ಮಾಡುತ್ತಿನೆಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!