Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದ ವೇದಿಕೆ ಕುಸಿತ : ಸ್ವಲ್ಪದರಲ್ಲಿಯೇ ಬಚಾವ್..!

Facebook
Twitter
Telegram
WhatsApp

ಗದಗ: ಚುನಾವಣೆಗಡ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಹೀಗಾಗಿ ಕಾಂಗ್ರೆಸ್ ನ ಹಿರಿಯ ನಾಯಕರು ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ, ಜನರನ್ನು ಸೆಳೆಯುವ, ತಾವೂ ನೀಡುವ ಭರವಸೆಗಳನ್ನು ಮನದಟ್ಟು ಮಾಡುತ್ತಿದ್ದಾರೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ಆ ಕಾರ್ಯಕ್ರಮ ಮುಗಿದ ಕೂಡಲೇ ವೇದಿಕೆ ಬಿದ್ದು ಹೋಗಿದೆ.

ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ವಟ್ಟಿಯಲ್ಲಿ ನಡೆದ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಗಾಳಿ ಸಮೇತ ಮಳೆಯಾಗುತ್ತಿದೆ. ಈ ಹಿನ್ನೆಲೆ ಬೆಳ್ವಟ್ಟಿಯಲ್ಲಿ ಹಾಕಿದ್ದ ಬೃಹತ್ ವೇದಿಕೆ ಬಿರುಗಾಳಿಗೆ ಸಿಲುಕಿ ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಅಂದ್ರೆ ಸಿದ್ದರಾಮಯ್ಯ ಅವರು ತೆರಳಿದ ಮೇಲೆ ಈ ದುರ್ಘಟನೆ ನಡೆದಿದೆ. ಜೊತೆಗೆ ಶಿರಹಟ್ಟಿ ಕಾಂಗ್ರೆಸ್ ಅಭ್ಯರ್ಥಿ ಸುಜಾತ ದೊಡ್ಮ‌ನಿ ಅವರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಕಾರ್ಯಕ್ರಮಕ್ಕೆ ಇಂದು ಸುತ್ತ ಮುತ್ತಲ ಹಳ್ಳಿಯಿಂದೆಲ್ಲಾ ಜನ ಬಂದಿದ್ದರು. ಹತ್ತು ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ಕಾರ್ಯಕ್ರಮ ಮುಗಿದ ಮೇಲೆ ಜನರೆಲ್ಲಾ ವಾಪಾಸ್ ಆಗಿದ್ದಾರೆ. ಬಳಿಕ ಅಲ್ಲಿ ಅಭ್ಯರ್ಥಿ ಸುಜಾತ ಮತ್ತು ಬೆಂಬಲಿಗರು ಮಾತ್ರ ಉಳಿದಿದ್ದರು. ಕಾರ್ಯಕರ್ತರ ಹುಟ್ಟುಹಬ್ಬವನ್ನು ಆಚರಣೆ ಮಾಡುವ ಪ್ಲ್ಯಾನ್ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಸದ್ಯ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!