ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮೈಸೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ಪಾದಯಾತ್ರೆಯನ್ನು ಮಾಡುತ್ತಿದ್ದಾರೆ. ಪಾದಯಾತ್ರೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಅದರ ಭಾಗವಾಗಿ ಕಾಂಗ್ರೆಸ್ ನವರು ಮೈಸೂರಿನಲ್ಲಿ ಜನಾಂದೋಲನ ಸಮಾವೇಶ ಹಮ್ಮಿಕೊಂಡಿದ್ದಾರೆ. ಈ ಸಮಾರಂಭದಲ್ಲಿ ಸಿದ್ದರಾಮಯ್ಯ ವಿರುದ್ಧ ಕತ್ತಿ ಮಸೆಯುತ್ತಿರುವವರಿಗೆ ಡಿಕೆಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದೊಂದು ಸಿಎಂ ಸಿದ್ದರಾಮಯ್ಯ ಅವರನ್ನು ಸಿಕ್ಕಿ ಹಾಕಿಸುವ ಹುನ್ನಾರ. ಈ ಕನಕಪುರದ ಬಂಡೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಇದರ. ಬಂಡೆ ಜೊತೆಗೆ ಶಾಸಕರಿದ್ದಾರೆ. ಈ ಬಂಡೆಯನ್ನು ಕಡೆದರೆ ಶಿಲೆ, ವಿರುದ್ಧ ನಿಂತುಕೊಂಡರೆ ನಾಶವೇ ಸರಿ ಎಂದು ವಿರೋಧ ಪಕ್ಷದ ನಾಯಕರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ.
ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ ದೋಸ್ತಿ ಮೊದಲೆಲ್ಲಾ ಹೇಗೆ ಕಿತ್ತಾಡುತ್ತಿದ್ದರು ಎಂಬುದರ ಬಗ್ಗೆ ವಿಡಿಯೋಗಳನ್ನು ಪ್ಲೇ ಮಾಡಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನ ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿಎಂ ಸಿದ್ದರಾಮಯ್ಯ ಅವರನ್ನು ಮೂಡಾ ಹಗರಣದಲ್ಲಿ ಒತ್ತಾಯಿಸಲಾಗುತ್ತಿದೆ. ಮೂಡಾ ಸೈಟ್ ಯಾರ ಆಡಳಿತ ಅವಧಿಯಲ್ಲಿ ನೀಡಿದ್ದು..? ಅದು ಬಿಜೆಪಿ ನಾಯಕರ ಅವಧಿಯಲ್ಲಿಯೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಈ ಹಗರಣ ವಿಚಾರ ಎಂದಿದ್ದಾರೆ.
ಇದೇ ವೇಳೆ ಜೆಡಿಎಸ್ ವಿರುದ್ಧ ಈ ಹಿಂದೆ ಯಡಿಯೂರಪ್ಪ ಅವರು, ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿದ ಹಗರಣವನ್ನು ಬಯಲು ಮಾಡಿದ್ದೇನೆ. ಮುಂದೆ ಮಾಡುತ್ತೇನೆ ಎಂಬ ವಿಡಿಯೋ ಪ್ಲೇ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್