Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಪತ್ನಿ ಮುಗ್ಧ ಹೆಣ್ಣು ಮಗಳು : ಈಶ್ವರಪ್ಪ

---Advertisement---

ಶಿವಮೊಗ್ಗ: ಮೂಡಾ ಕೇಸ್ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿಲ್ಲ. ರಾಜ್ಯಪಾಲರ ಆದೇಶವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ಬಿಜೆಪಿ ನಾಯಕರು ಸಿದ್ದರಾಮಯ್ಯ ಮೇಲೆ ವಾಗ್ದಾಳಿ ನಡೆಸಲು ಶುರು ಮಾಡಿದ್ದಾರೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಒತ್ತಾಯಿಸುತ್ತಿದ್ದಾರೆ. ಇದರ ನಡುವೆ ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರ ಪತ್ನಿ ಪರವಾಗಿ ಮಾತನಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಗ್ಗೆ ವೈಯಕ್ತಿಕವಾಗಿ ನಾನು ಏನು ಹೇಳಲ್ಲ. ತೀರ್ಪು ಬರುವುದಕ್ಕೂ ಮುನ್ನ ನ್ಯಾಯ ಸಿಗುತ್ತದ ಎಂದು ಸಿಎಂ ಹೇಳುತ್ತಿದ್ದರು. ತೀರ್ಪು ಬಂದ ಮೇಲೆ ಅದರ ಬಗ್ಗೆ ಮನ್ನಣೆ ಕೊಡಲ್ಲ ಎಂದು ಹೇಳುತ್ತಿದ್ದಾರೆ. ಕೋರ್ಟ್ ತೀರ್ಪಿಗೆ ಸಿದ್ದರಾಮಯ್ಯ ಅವರು ಬದ್ಧರಾಗುತ್ತಾರೋ ಇಲ್ವೊ ಗೊತ್ತಿಲ್ಲ. ಭಗವಂತನ ಧಯೆಯಿಂದ ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಗಲಿ. ಸಿದ್ದರಾಮಯ್ಯ ಪತ್ನಿ ಮುಗ್ಧ ಹೆಣ್ಣು ಮಗಳು. ಅವರಿಗೆ ಅನ್ಯಾಯವಾಗಬಾರದು ಎಂದಿದ್ದಾರೆ.

ಸಾತ್ವಿಕ ಹೆಣ್ಣು ಮಗಳು ಅವರು. ಭಗವಂತನಿಗೆ ನಾನು ಪ್ರಾರ್ಥನೆ ಮಾಡುತ್ತೇನೆ. ಆ ತಾಯಿಗೆ ಅನ್ಯಾಯ ಆಗಬಾರದು. ಸಹಿ ಮಾಡು ಅಂದ್ರೆ ಮನೆಯವರು ಸಹಿ ಮಾಡ್ತಾರೆ. ಆ ತಾಯಿಗೆ ಅನ್ಯಾಯ ಆಗಬಾರದು. ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ ಅಂತಿದ್ದಾರೆ. ಹಾಗಾದ್ರೆ ಕೋರ್ಟ್ ಮುಚ್ಚಿಬಿಡಿ. ಯಾಕೆ ಬೇಕು ಕೋರ್ಟ್. ನಿಮ್ಮ ಪರವಾಗಿ ಬಂದ್ರೆ ನ್ಯಾಯ, ನಿಮ್ಮ ವಿರುದ್ಧ ತೀರ್ಪು ಬಂದ್ರೆ ಅನ್ಯಾಯನಾ..? ಸಿದ್ದರಾಮಯ್ಯ ಅವರೇ ನೀವೂ ಸುಪ್ರೀಂ ಕೋರ್ಟ್ ಗೆ ಹೋಗಿ. ಆದರೆ ನ್ಯಾಯಾಂಗ ವ್ಯವಸ್ಥೆಗೆ ತಲೆಬಾಗಿ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಅದರ ಜೊತೆಗೆ ಸಿಎಂ ಪತ್ನಿ ಬಗ್ಗೆ ಕಾಳಜಿ ತೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...