Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜೊತೆಜೊತೆಯಾಗಿ ಧರ್ಮಸ್ಥಳಕ್ಕೆ ಬಂದ ಸಿದ್ದು, ಡಿಕೆಶಿ : ಮಂಜುನಾಥನಿಗೆ ಹರಕೆ ತೀರಿಸಿ, ವಿಶೇಷ ಪೂಜೆ ಮಾಡಿಸಿದ ಸಿಎಂ, ಡಿಸಿಎಂ

---Advertisement---

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇಬ್ಬರು ಜೊತೆ ಜೊತೆಯಾಗಿಯೇ ಓಡಾಡುವ ಮೂಲಕ ಇಬ್ಬರ ನಡುವಿನ ಬಾಂಧವ್ಯ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ಸಾರಿದ್ದಾರೆ. ಸಿಎಂ ಖುರ್ಚಿಗಾಗಿ ಇಬ್ಬರು ಕಿತ್ತಾಡುತ್ತಾರೆ ಎಂಬ ವಿರೋಧ ಪಕ್ಷದ ಮಾತುಗಳಿಗೆ ಈ ನಡೆ ಬಿಸಿ ಮುಟ್ಟಿಸಿದೆ.

ಇಂದು ಮಧ್ಯಾಹ್ನವೇ ಮೈಸೂರಿನ ವಿಮಾನ ನಿಲ್ದಾಣದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಅಲ್ಲಿಂದ ನೇರವಾಗಿ ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಗೆ ಹೋದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬರುತ್ತಿದ್ದಂತೆ ದೇವಸ್ಥಾನದ ಆವರಣದಲ್ಲಿ ಕುಂಭಮೇಳ, ವಾದ್ಯಘೋಷ್ಠಿಗಳು ಸ್ವಾಗತ ಕೋರಿದವು. ಕ್ಷೇತ್ರದ ಪರವಾಗಿ ಹೆಗ್ಗಡೆ ಸಹೋದರ ಹರ್ಷೇಂದ್ರ ಹೆಗ್ಗಡೆ ಸ್ವಾಗತ ಕೋರಿದರು. ಹರಕೆಯಂತೆ ಡಿಕೆಶಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿಶೇಷ ಎಂದರೆ ಸಿಎಂ ಹಾಗೂ ಡಿಸಿಎಂ ಸಾಂಪ್ರದಾಯಿಕ ಉಡುಗೆಯಲ್ಲಿ, ಭಕ್ತಿ ಭಾವದಿಂದ ಪೂಜಾ ಕೈಂಕರ್ಯ ನೆರವೇರಿಸಿದರು.

 

ಕಳೆದ ಬಾರಿ ಬಂದಾಗ ಸಿದ್ದರಾಮಯ್ಯ ಅವರು ಮಾಂಸ ತಿಂದು ಧರ್ಮಸ್ಥಳಕ್ಕೆ ಬಂದಿದ್ದರು ಎಂಬ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕೆಲವರು ಆಹಾರ ಎಂಬುದು ಅವರವರ ವೈಯಕ್ತಿಕ ಆಯ್ಕೆ ಎಂದು ಸಪೋರ್ಟ್ ಮಾಡಿದ್ದರೆ ಇನ್ನು ಕೆಲವರು ದೇವಸ್ಥಾನಕ್ಕೆ ಮಾಂಸ ತಿಂದು ಹೋದರಾ..? ಎಂದು ಸಿಎಂ ವಿರುದ್ಧ ಹೌಹಾರಿದ್ದರು. ಆದರೆ ಈ ಬಾರಿ ಆ ಎಲ್ಲಾ ಕಳಂಕದಿಂದ ಸಿಎಂ ಸಿದ್ದರಾಮಯ್ಯ ದೂರ ದೂರ. ಅಚ್ಚುಕಟ್ಟಾಗಿ ಬೆಳಗ್ಗೆ ಒಂದು ದೋಸೆ ತಿಂದು, ದೇವಸ್ಥಾನದ ಸಂಪ್ರದಾಯದಂತೆ ಪಂಚೆ, ಶಲ್ಯ ತೊಟ್ಟು ದೇವರ ದರ್ಶನ ಪಡೆದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment