Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

100 ಕೋಟಿ ಕೋವಿಡ್ ಲಸಿಕೆ ಮಹತ್ವದ ಸಾಧನೆ : ಸಿ.ಎನ್.ಅಶ್ವತ್ಥನಾರಾಯಣ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ 83% ಜನರಿಗೆ ಕೋವಿಡ್ ಮೊದಲನೇ ಲಸಿಕೆ ಕೊಡಲಾಗಿದೆ. 2.05 ಕೋಟಿ ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 100 ಕೋಟಿ ಕೋವಿಡ್ ಲಸಿಕೆ ಮಹತ್ವದ ಸಾಧನೆ ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿದರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಈ ಸಾಧನೆ ಸಾಧ್ಯವಾಗಿದೆ ಎಂದರು.

ಜನಜೀವನ ಎಂದಿನಂತೆ ನಡೆಯಲು ಆರೋಗ್ಯ
ಮತ್ತು ಸಚಿವಸಂಪುಟ ಶ್ರಮಿಸಿದೆ. ಆರ್ಥಿಕ ವಹಿವಾಟು ಕೋವಿಡ್ಪೂಂರ್ವ ಅವಧಿಗಿಂತ ಹೆಚ್ಚು ಉತ್ತಮವಾಗುವ ಹಂತ ತಲುಪಿದೆ. ಲಸಿಕೆಯಿಂದ ಆಶಾದಾಯಕ ಮತ್ತು ಭರವಸೆದಾಯಕ ಜೀವನ ಸಾಧ್ಯವಾಗಿದೆ ಎಂದು ವಿಶ್ಲೇಷಿಸಿದರು. ಲಸಿಕೆ ಮೂರನೇ ಡೋಸ್ ಕೊಡುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದರು.
ಕೋವಿಡ್ ನಿಯಂತ್ರಣ ಮತ್ತು ಜನರ ಜೀವನ ರಕ್ಷಣೆ ವಿಚಾರದಲ್ಲಿ ಲಸಿಕೆ ಮಹತ್ವದ ಪಾತ್ರ ವಹಿಸಿದೆ. ವೈದ್ಯರು, ವೈದ್ಯಕೀಯ ಸಿಬ್ಬಂದಿಯ ಶ್ರಮ ಹಾಗೂ ದೇಶದ ನಾಗರಿಕರ ಸಹಕಾರದಿಂದ 100 ಕೋಟಿ ಲಸಿಕೆ ಡೋಸ್ ಕೊಡಲು ಸಾಧ್ಯವಾಗಿದೆ. ಕೆಲವು ಮುಂದುವರಿದ ದೇಶಗಳಲ್ಲಿ ಶೇ 20ರಷ್ಟು ಲಸಿಕೆ ನೀಡುವ ಸಾಧನೆಯೂ ಆಗಿಲ್ಲ ಎಂದು ವಿಶ್ಲೇಷಿಸಿದರು.
ಜನರು ನರೇಂದ್ರ ಮೋದಿಯವರ ನಾಯಕತ್ವ ಮತ್ತು ಜನಪರ ಕಾರ್ಯಕ್ರಮಗಳ ಬಗ್ಗೆ ನಂಬಿಕೆ, ವಿಶ್ವಾಸ ಮತ್ತು ಭರವಸೆ ಹೊಂದಿರುವುದರ ಸಂಕೇತ ಇದಾಗಿದೆ. ಆತ್ಮ ನಿರ್ಭರ್ ಭಾರತ್ ಪರಿಕಲ್ಪನೆಯಡಿ ನಮ್ಮದೇ ಲಸಿಕೆಯನ್ನು ನಮ್ಮ ಜನರಿಗೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!