Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಸಾಧ್ಯವಾದದ್ದನ್ನು ಸಾಧ್ಯ ಮಾಡಲು ಮೌನ ಒಂದು ಶಕ್ತಿ, ಸ್ಪೂರ್ತಿ : ಬಸವಪ್ರಭು ಸ್ವಾಮೀಜಿ

Facebook
Twitter
Telegram
WhatsApp

ಚಿತ್ರದುರ್ಗ, (ಜೂ.26) : ಶ್ರೀ ಮುರುಘಾಮಠದಲ್ಲಿ ಮುಂಜಾನೆ ಬಸವಪ್ರಭು ಸ್ವಾಮೀಜಿ ಕರ್ತೃಶ್ರೀ ಗುರು ಮುರುಘೇಶನಿಗೆ ಪೂಜೆಯನ್ನು ಸಲ್ಲಿಸಿ ಮೌನವನ್ನು ಸಮಾಪ್ತಿ ಮಾಡಿದರು.

ಸಮಾರಂಭದಲ್ಲಿ ಆಶೀರ್ವಚನ ನೀಡಿದ ಬಸವಪ್ರಭು ಸ್ವಾಮೀಜಿ, ಮಠದ ಸಂಕಷ್ಟಗಳ ನಿವಾರಣೆಗಾಗಿ ಒಂದು ದಿನದ ಮೌನಾಚರಣೆ ಮಾಡಲಾಯಿತು. ಮೌನ ಒಂದು ದೊಡ್ಡ ಶಕ್ತಿ. ಅದು ನಮ್ಮೊಳಗಿರುವ ಇಚ್ಛಾಶಕ್ತಿಯನ್ನು ಮತ್ತಷ್ಟು ಗಟ್ಟಿಯಾಗಿಸುತ್ತದೆ. ಅಸಾಧ್ಯವಾದ ಕಾರ್ಯವನ್ನು ಸಾಧ್ಯ ಮಾಡಲು ಮೌನ ಒಂದು ಶಕ್ತಿಯಾಗಿ ನಮಗೆ ಕಾರ್ಯಗಳನ್ನು ಸಾಧಿಸಲು ಸ್ಪೂರ್ತಿಯನ್ನು ನೀಡುತ್ತದೆ.

ಹಾಗಾಗಿ ಜೀವನದಲ್ಲಿ ಪ್ರತಿಯೊಬ್ಬರೂ ಮೌನವಾಗಿರುವ  ಅಭ್ಯಾಸವನ್ನು ಮಾಡಬೇಕು. ವಿದ್ಯಾರ್ಥಿಗಳು ನೀವು ಸಮಯ ಸಿಕ್ಕಾಗ ಸ್ವಲ್ಪ ಸಮಯ ಮೌನವಾಗಿರುವ  ಪದ್ಧತಿಯನ್ನು ಅಳವಡಿಸಿಕೊಂಡರೆ ನಿಮಗೆ ಏಕಾಗ್ರತೆ ಹೆಚ್ಚುತ್ತದೆ. ಅಷ್ಟೇ ಅಲ್ಲದೇ ನಿಮಗೆ ಆತ್ಮವಿಶ್ವಾಸವನ್ನು ಹೆಚ್ಚಿಸಿ ಚೆನ್ನಾಗಿ ಓದುವ ಅಭಿರುಚಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಮೌನ ಜೀವನದ ಅನೇಕ ಸಮಸ್ಯೆಗಳನ್ನು ಪರಿಹರಿಸುವ ಔಷಧಿಯಾಗಿದೆ ಎಂದರು.

ಈ ಸಂಧರ್ಭದಲ್ಲಿ ವಕೀಲರಾದ ಪ್ರತಾಪ್ ಜೋಗಿಯವರು ಸ್ವಾಮೀಜಿಯವರ ಮೌನ ಸಮಾಪ್ತಿ ಮಾಡಿದ ನಂತರ ಶ್ರೀಮಠದ ವಿದ್ಯಾರ್ಥಿಗಳಿಗೆ ಮಾವಿನ ಹಣ್ಣುಗಳನ್ನು ಹಂಚಿದರು. ಪೂಜ್ಯರಿಗೆ ಗೌರವ ಸಲ್ಲಿಸಿದರು.
ಸಮಾರಂಭದಲ್ಲಿ ಬಸವಾದಿತ್ಯ ದೇವರು, ಮುರುಗೇಂದ್ರ ಸ್ವಾಮೀಜಿ, ನಿಪ್ಪಾಣಿಯ ಬಸವ ಮಲ್ಲಿಕಾರ್ಜುನ ಸ್ವಾಮೀಜಿ, ಗುರುಕುಲದ ಸಾಧಕರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!